ಹೋಟೆಲ್ ನಲ್ಲಿ ತನ್ನ ಪಾಡಿಗೆ ತಾನು ಊಟ ಮಾಡುತ್ತಿದ್ದ ವ್ಯಕ್ತಿ ಮೇಲೆ ದುಶ್ಕರ್ಮಿಗಳು ಅಟ್ಯಾಕ್ ಮಾಡಿ, ಲಾಂಗ್ ಮಚ್ಚುಗಳಿಂದ ಮನಸ್ಸೋಯಿಚ್ಛೆ ಹಲ್ಲೆ ನಡೆಸಿದ್ದಾರೆ.
ಯಲಹಂಕ ಬಳಿಯ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಘಟನೆ ನಡೆದಿದೆ.
ಕೈ ಕತ್ತರಿಸಿ, ಕಾಲು ದೇಹದ ಮೇಲೆ ದುಷ್ಕರ್ಮಿಗಳು ಲಾಂಗ್ ಬೀಸಿ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಮಂಜುನಾಥ್ ಎಂಬ ವ್ಯಕ್ತಿ ಮಾರಣಾಂತಿಕವಾಗಿ ಹಲ್ಲೆಗೆ ತುತ್ತಾಗಿ ಆಸ್ಪತ್ರೆ ಪಾಲಾಗಿದ್ದಾನೆ.
ಶ್ರೀರಾಮ್ ಎಂಬಾತ ತನ್ನ ಹುಡುಗರೊಂದಿಗೆ ಹಲ್ಲೆ ನಡೆಸಿದ್ದಾರೆ. ಆರೋಪಿ ಶ್ರೀರಾಮ್ ಮತ್ತು ಆತನ ಸಂಗಡಿಗರು ದೇವನಹಳ್ಳಿಯ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭೋವಿಪಾಳ್ಯದ ನಿವಾಸಿಗಳಾಗಿದ್ದಾರೆ.
ತಂದೆಯ ಕೊಲೆ ಕೇಸ್ ನಲ್ಲಿ ಮಂಜುನಾಥ್ ಸಹಾಯ ಮಾಡಿಲ್ಲ ಎಂಬ ಕಾರಣಕ್ಕೆ ಹಲ್ಲೆ ಮಾಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಹಲ್ಲೆ ಸ್ಥಳಕ್ಕೆ ಚಿಕ್ಕಜಾಲ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…