ಹೋಟೆಲ್ ನಲ್ಲಿ ತನ್ನ ಪಾಡಿಗೆ ತಾನು ಊಟ ಮಾಡುತ್ತಿದ್ದ ವ್ಯಕ್ತಿ ಮೇಲೆ ದುಶ್ಕರ್ಮಿಗಳು ಅಟ್ಯಾಕ್ ಮಾಡಿ, ಲಾಂಗ್ ಮಚ್ಚುಗಳಿಂದ ಮನಸ್ಸೋಯಿಚ್ಛೆ ಹಲ್ಲೆ ನಡೆಸಿದ್ದಾರೆ.
ಯಲಹಂಕ ಬಳಿಯ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಘಟನೆ ನಡೆದಿದೆ.
ಕೈ ಕತ್ತರಿಸಿ, ಕಾಲು ದೇಹದ ಮೇಲೆ ದುಷ್ಕರ್ಮಿಗಳು ಲಾಂಗ್ ಬೀಸಿ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಮಂಜುನಾಥ್ ಎಂಬ ವ್ಯಕ್ತಿ ಮಾರಣಾಂತಿಕವಾಗಿ ಹಲ್ಲೆಗೆ ತುತ್ತಾಗಿ ಆಸ್ಪತ್ರೆ ಪಾಲಾಗಿದ್ದಾನೆ.
ಶ್ರೀರಾಮ್ ಎಂಬಾತ ತನ್ನ ಹುಡುಗರೊಂದಿಗೆ ಹಲ್ಲೆ ನಡೆಸಿದ್ದಾರೆ. ಆರೋಪಿ ಶ್ರೀರಾಮ್ ಮತ್ತು ಆತನ ಸಂಗಡಿಗರು ದೇವನಹಳ್ಳಿಯ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭೋವಿಪಾಳ್ಯದ ನಿವಾಸಿಗಳಾಗಿದ್ದಾರೆ.
ತಂದೆಯ ಕೊಲೆ ಕೇಸ್ ನಲ್ಲಿ ಮಂಜುನಾಥ್ ಸಹಾಯ ಮಾಡಿಲ್ಲ ಎಂಬ ಕಾರಣಕ್ಕೆ ಹಲ್ಲೆ ಮಾಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಹಲ್ಲೆ ಸ್ಥಳಕ್ಕೆ ಚಿಕ್ಕಜಾಲ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…