Categories: ರಾಜ್ಯ

ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯ: ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು- ಸಿಎಂ ಸಿದ್ದರಾಮಯ್ಯ

ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು. ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್.ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗಾತಿಗಳನ್ನು ಇಂದು ನಾನು ಸ್ಮರಿಸುತ್ತೇನೆ. ಅವತ್ತು ಕೆ.ಹೆಚ್.ಪಾಟೀಲ್, ಇಂದು ಹೆಚ್.ಕೆ.ಪಾಟೀಲ್. ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ.

ಗದಗದಲ್ಲಿ “ಕರ್ನಾಟಕ ಸಂಭ್ರಮ-50” ಅದ್ಧೂರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಅವರು, ಇಂಗ್ಲಿಷ್ ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದರು.

ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ ಎಂದು ಹೇಳಿದರು.

ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಈ ಸಮಾಜದ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ.

ಹಿಂದೆ ಕೆ.ಹೆಚ್.ಪಾಟೀಲರು ಇಡೀ ಜಿಲ್ಲೆಗೆ ಕುಡಿಯುವ ನೀರು ಕೊಟ್ಟರು. ಅವರ ಪುತ್ರ ಹೆಚ್.ಕೆ.ಪಾಟೀಲರೂ ಇಡೀ ರಾಜ್ಯಕ್ಕೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸಿದರೆ ಸಾಕು, ನೀವೆಲ್ಲಾ ಹೆಚ್.ಕೆ.ಪಾಟೀಲರನ್ನು ಗೆಲ್ಲಿಸಬೇಕು. ಇಡೀ ರಾಜ್ಯಕ್ಕೆ ಅಷ್ಟೊಂದು ಕೆಲಸ ಮಾಡಿರುವ ಹೆಚ್.ಕೆ.ಪಾಟೀಲರು ಮತ ಕೇಳಬಾರದು. ನೀವೆಲ್ಲಾ ಅವರನ್ನೂ ಹಾಗೇ ಗೆಲ್ಲಿಸಬೇಕು ಎಂದರು.

ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ ರೂ.61 ಕೋಟಿ ನೀಡಿದ್ದೇವೆ. ಅಗತ್ಯ ಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

57 minutes ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

4 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

5 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

16 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago