Categories: ರಾಜ್ಯ

ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯ: ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು- ಸಿಎಂ ಸಿದ್ದರಾಮಯ್ಯ

ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು. ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್.ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗಾತಿಗಳನ್ನು ಇಂದು ನಾನು ಸ್ಮರಿಸುತ್ತೇನೆ. ಅವತ್ತು ಕೆ.ಹೆಚ್.ಪಾಟೀಲ್, ಇಂದು ಹೆಚ್.ಕೆ.ಪಾಟೀಲ್. ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ.

ಗದಗದಲ್ಲಿ “ಕರ್ನಾಟಕ ಸಂಭ್ರಮ-50” ಅದ್ಧೂರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಅವರು, ಇಂಗ್ಲಿಷ್ ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದರು.

ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ ಎಂದು ಹೇಳಿದರು.

ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಈ ಸಮಾಜದ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ.

ಹಿಂದೆ ಕೆ.ಹೆಚ್.ಪಾಟೀಲರು ಇಡೀ ಜಿಲ್ಲೆಗೆ ಕುಡಿಯುವ ನೀರು ಕೊಟ್ಟರು. ಅವರ ಪುತ್ರ ಹೆಚ್.ಕೆ.ಪಾಟೀಲರೂ ಇಡೀ ರಾಜ್ಯಕ್ಕೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸಿದರೆ ಸಾಕು, ನೀವೆಲ್ಲಾ ಹೆಚ್.ಕೆ.ಪಾಟೀಲರನ್ನು ಗೆಲ್ಲಿಸಬೇಕು. ಇಡೀ ರಾಜ್ಯಕ್ಕೆ ಅಷ್ಟೊಂದು ಕೆಲಸ ಮಾಡಿರುವ ಹೆಚ್.ಕೆ.ಪಾಟೀಲರು ಮತ ಕೇಳಬಾರದು. ನೀವೆಲ್ಲಾ ಅವರನ್ನೂ ಹಾಗೇ ಗೆಲ್ಲಿಸಬೇಕು ಎಂದರು.

ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ ರೂ.61 ಕೋಟಿ ನೀಡಿದ್ದೇವೆ. ಅಗತ್ಯ ಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

2 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

6 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

13 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

14 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago