ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು. ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್.ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗಾತಿಗಳನ್ನು ಇಂದು ನಾನು ಸ್ಮರಿಸುತ್ತೇನೆ. ಅವತ್ತು ಕೆ.ಹೆಚ್.ಪಾಟೀಲ್, ಇಂದು ಹೆಚ್.ಕೆ.ಪಾಟೀಲ್. ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ.
ಗದಗದಲ್ಲಿ “ಕರ್ನಾಟಕ ಸಂಭ್ರಮ-50” ಅದ್ಧೂರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಅವರು, ಇಂಗ್ಲಿಷ್ ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದರು.
ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ ಎಂದು ಹೇಳಿದರು.
ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಈ ಸಮಾಜದ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ.
ಹಿಂದೆ ಕೆ.ಹೆಚ್.ಪಾಟೀಲರು ಇಡೀ ಜಿಲ್ಲೆಗೆ ಕುಡಿಯುವ ನೀರು ಕೊಟ್ಟರು. ಅವರ ಪುತ್ರ ಹೆಚ್.ಕೆ.ಪಾಟೀಲರೂ ಇಡೀ ರಾಜ್ಯಕ್ಕೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸಿದರೆ ಸಾಕು, ನೀವೆಲ್ಲಾ ಹೆಚ್.ಕೆ.ಪಾಟೀಲರನ್ನು ಗೆಲ್ಲಿಸಬೇಕು. ಇಡೀ ರಾಜ್ಯಕ್ಕೆ ಅಷ್ಟೊಂದು ಕೆಲಸ ಮಾಡಿರುವ ಹೆಚ್.ಕೆ.ಪಾಟೀಲರು ಮತ ಕೇಳಬಾರದು. ನೀವೆಲ್ಲಾ ಅವರನ್ನೂ ಹಾಗೇ ಗೆಲ್ಲಿಸಬೇಕು ಎಂದರು.
ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ ರೂ.61 ಕೋಟಿ ನೀಡಿದ್ದೇವೆ. ಅಗತ್ಯ ಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…