Categories: ರಾಜ್ಯ

ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯ: ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು- ಸಿಎಂ ಸಿದ್ದರಾಮಯ್ಯ

ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು. ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್.ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗಾತಿಗಳನ್ನು ಇಂದು ನಾನು ಸ್ಮರಿಸುತ್ತೇನೆ. ಅವತ್ತು ಕೆ.ಹೆಚ್.ಪಾಟೀಲ್, ಇಂದು ಹೆಚ್.ಕೆ.ಪಾಟೀಲ್. ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ.

ಗದಗದಲ್ಲಿ “ಕರ್ನಾಟಕ ಸಂಭ್ರಮ-50” ಅದ್ಧೂರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಅವರು, ಇಂಗ್ಲಿಷ್ ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದರು.

ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ ಎಂದು ಹೇಳಿದರು.

ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಈ ಸಮಾಜದ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ.

ಹಿಂದೆ ಕೆ.ಹೆಚ್.ಪಾಟೀಲರು ಇಡೀ ಜಿಲ್ಲೆಗೆ ಕುಡಿಯುವ ನೀರು ಕೊಟ್ಟರು. ಅವರ ಪುತ್ರ ಹೆಚ್.ಕೆ.ಪಾಟೀಲರೂ ಇಡೀ ರಾಜ್ಯಕ್ಕೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸಿದರೆ ಸಾಕು, ನೀವೆಲ್ಲಾ ಹೆಚ್.ಕೆ.ಪಾಟೀಲರನ್ನು ಗೆಲ್ಲಿಸಬೇಕು. ಇಡೀ ರಾಜ್ಯಕ್ಕೆ ಅಷ್ಟೊಂದು ಕೆಲಸ ಮಾಡಿರುವ ಹೆಚ್.ಕೆ.ಪಾಟೀಲರು ಮತ ಕೇಳಬಾರದು. ನೀವೆಲ್ಲಾ ಅವರನ್ನೂ ಹಾಗೇ ಗೆಲ್ಲಿಸಬೇಕು ಎಂದರು.

ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ ರೂ.61 ಕೋಟಿ ನೀಡಿದ್ದೇವೆ. ಅಗತ್ಯ ಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

3 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

3 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

4 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

5 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

7 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

8 hours ago