ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು. ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್.ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗಾತಿಗಳನ್ನು ಇಂದು ನಾನು ಸ್ಮರಿಸುತ್ತೇನೆ. ಅವತ್ತು ಕೆ.ಹೆಚ್.ಪಾಟೀಲ್, ಇಂದು ಹೆಚ್.ಕೆ.ಪಾಟೀಲ್. ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ.
ಗದಗದಲ್ಲಿ “ಕರ್ನಾಟಕ ಸಂಭ್ರಮ-50” ಅದ್ಧೂರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಅವರು, ಇಂಗ್ಲಿಷ್ ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದರು.
ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ ಎಂದು ಹೇಳಿದರು.
ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಈ ಸಮಾಜದ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ.
ಹಿಂದೆ ಕೆ.ಹೆಚ್.ಪಾಟೀಲರು ಇಡೀ ಜಿಲ್ಲೆಗೆ ಕುಡಿಯುವ ನೀರು ಕೊಟ್ಟರು. ಅವರ ಪುತ್ರ ಹೆಚ್.ಕೆ.ಪಾಟೀಲರೂ ಇಡೀ ರಾಜ್ಯಕ್ಕೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸಿದರೆ ಸಾಕು, ನೀವೆಲ್ಲಾ ಹೆಚ್.ಕೆ.ಪಾಟೀಲರನ್ನು ಗೆಲ್ಲಿಸಬೇಕು. ಇಡೀ ರಾಜ್ಯಕ್ಕೆ ಅಷ್ಟೊಂದು ಕೆಲಸ ಮಾಡಿರುವ ಹೆಚ್.ಕೆ.ಪಾಟೀಲರು ಮತ ಕೇಳಬಾರದು. ನೀವೆಲ್ಲಾ ಅವರನ್ನೂ ಹಾಗೇ ಗೆಲ್ಲಿಸಬೇಕು ಎಂದರು.
ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ ರೂ.61 ಕೋಟಿ ನೀಡಿದ್ದೇವೆ. ಅಗತ್ಯ ಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…