ಹೋರಾಟ ಮಾಡಿದ ಸಮುದಾಯ ಮತ್ತು ಸುಮ್ಮನ್ನಿದ್ದ ಸಮುದಾಯಗಳನ್ನ ಸರ್ಕಾರ ಒಂದೇ ತಕ್ಕಡಿಯಲ್ಲಿ ತೂಗಿ ಒಳ ಮೀಸಲಾತಿ ಜಾರಿ-ರಾಮಕೃಷ್ಣಪ್ಪ

ದೊಡ್ಡಬಳ್ಳಾಪುರ : ಮಾದಿಗ ಸಮುದಾಯದ 35 ವರ್ಷಗಳ ಹೋರಾಟಕ್ಕೆ ಫಲವಾಗಿ ಒಳ ಮೀಸಲಾತಿ ಜಾರಿಯಾಗಿದೆ. ಹೋರಾಟ ಮಾಡಿದ ಸಮುದಾಯ ಮತ್ತು ಸುಮ್ಮನ್ನಿದ್ದ ಸಮುದಾಯಗಳನ್ನ ಸರ್ಕಾರ ಒಂದೇ ತಕ್ಕಡಿಯಲ್ಲಿ ತೂಗಿ ಒಳ ಮೀಸಲಾತಿ ಜಾರಿ ಮಾಡಿದೆ. ಅನ್ಯಾಯದ ಸಣ್ಣ ನೋವಿನಲ್ಲಿಯೂ ಮಾದಿಗ ಸಮುದಾಯ ಮುಖಂಡರು ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಪಟ್ಟರು.

ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಮಾದಿಗ ಸಮುದಾಯಗಳ ಒಕ್ಕೂಟದ ಪತ್ರಿಕಾಗೋಷ್ಠಿಯಲ್ಲಿ ಒಳ ಮೀಸಲಾತಿಯನ್ನ ಮಾದಿಗ ಸಮುದಾಯ ಮುಖಂಡರು ಸ್ವಾಗತಿಸಿದರು. ಇದೇ ವೇಳೆ ಮಾತನಾಡಿದ ಸಮುದಾಯದ ಮುಖಂಡರಾದ ರಾಮಕೃಷ್ಣಪ್ಪ, ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲೇ ಒಳ ಮೀಸಲಾತಿ ಜಾರಿ ಮಾಡುವುದಾಗಿ ಭರವಸೆ ನೀಡಿತ್ತು. ಅದರಂತೆ ಆಗಸ್ಟ್ 19ರ 2025ರಲ್ಲಿ ಸರ್ಕಾರ ಒಳ ಮೀಸಲಾತಿಯನ್ನ ಜಾರಿ ಮಾಡಿದೆ ಎಂದರು.

101 ಜಾತಿಗಳಲ್ಲಿ ಮಾದಿಗ ಸಮುದಾಯ ರಾಜಕೀಯವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಬಗ್ಗೆ ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿಯೂ ಉಲ್ಲೇಖವಾಗಿದೆ. ನಾಗಮೋಹನ್ ದಾಸ್ ವರದಿಯಲ್ಲಿ ಪರಿಶಿಷ್ಟ ಜಾತಿಗಳನ್ನ 5 ಭಾಗಗಳಾಗಿ ವಿಂಗಡಿಸಿದ್ದರು, ಸರ್ಕಾರ 3 ಭಾಗಗಳಾಗಿ ವಿಂಗಡಿಸಿ ಒಳ ಮೀಸಲಾತಿ ಜಾರಿ ಮಾಡಿದೆ. ಅತಿ ಹಿಂದುಳಿದ ಜಾತಿಗಳಾಗಿ ಎಡಗೈ ಮತ್ತು ಸಂಬಂಧಿತ ಜಾತಿಗಳನ್ನ ಪವರ್ಗ 1ಕ್ಕೆ ಸೇರಿಸಿ ಶೇಕಡಾ 6ರಷ್ಟು ಮೀಸಲಾತಿ ನೀಡಲಾಗಿದೆ, ಬಲಗೈ ಮತ್ತು ಸಂಬಂಧಿತ ಜಾತಿಗಳನ್ನ ಪವರ್ಗ 2 ಗೆ ಸೇರಿಸಲಾಗಿದ್ದು ಶೇಕಡಾ 6 ರಷ್ಟು ಮೀಸಲಾತಿ ಮತ್ತು ಸ್ಪೃಷ್ಯ ಮತ್ತು ಅಲೆಮಾರಿ ಜಾತಿಗಳಿಗನ್ನ ಪವರ್ಗ 3ರಲ್ಲಿ ಶೇಕಡಾ 5 ರಷ್ಟು ಮೀಸಲಾತಿಯನ್ನ ಘೋಷಣೆ ಮಾಡಲಾಗಿದೆ ಎಂದರು.

ದೇವರಾಜು ಅರಸುರವರು ಮಾಡಿದ ಒಂದು ಸಣ್ಣ ತಪ್ಪಿನಿಂದ ಸ್ಪೃಷ್ಯ ಜಾತಿಗಳನ್ನ ಎಸ್ಸಿ ಪಟ್ಟಿಗೆ ಸೇರಸಲಾಗಿತು. ಅಲೆಮಾರಿ ಸಮುದಾಯ ಇವತ್ತು ಸ್ಪೃಶ್ಯ ಜಾತಿಗಳನ್ನೊಂದಿಗೆ ಪೈಪೋಟಿ ಮಾಡಲು ಸಾಧ್ಯವಿಲ್ಲ, ಅವರಿಗೆ ಶೇಕಡಾ 1 ರಷ್ಟು ಮೀಸಲಾತಿಯನ್ನ ನೀಡ ಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಬಲಗೈ ಮತ್ತು ಎಡಗೈ ಸಮುದಾಯದ ನಾಯಕರೊಂದಿಗೆ ಚರ್ಚಿಸುತ್ತಿದ್ದು, ಅಲೆಮಾರಿ ಸಮುದಾಯಕ್ಕೆ 1ರಷ್ಟು ಮೀಸಲಾತಿ ಸಿಗುವ ಸಾಧ್ಯತೆ ಇದೆ ಎಂದರು.

ನಾಗರಾಜು ಬಚ್ಚಹಳ್ಳಿ ಮಾತನಾಡಿ , ನಾಗಮೋಹನ್ ದಾಸ್ ಕೊಟ್ಟ ವರದಿಯನ್ನ ಸರ್ಕಾರ ಗಾಳಿಗೆ ತೂರಿ ವೊಲೈಕೆ ರಾಜಕೀಯ ಮತ್ತು ಸಮುದಾಯದ ವೋಟ್ ಬ್ಯಾಂಕ್ ಗಾಗಿ ಮಣಿದಿದೆ. ಅಲೆಮಾರಿಗಳು ನಮಗಿಂತ ಕೆಟ್ಟ ಸ್ಥಿತಿಯಲ್ಲಿದ್ದಾರೆ, ಅವರನ್ನ ಸ್ಪೃಶ್ಯ ಜಾತಿಗಳಿಗೆ ಸೇರಿಸಿದ್ದಾರೆ, ಜನಸಂಖ್ಯೆಯಲ್ಲಿ ಹೆಚ್ಚಿರುವು ನಾವೇ ಅವರೊಂದಿಗೆ ಹೋರಾಟ ಮಾಡಿಕೊಂಡು ಬಂದಿದ್ದೇವೆ, ಈ ಇಂತಹ ಪರಿಸ್ಥಿತಿಯಲ್ಲಿ ಅಲೆಮಾರಿಗಳು ಸ್ಪೃಷ್ಯ ಜಾತಿಗಳೊಂದಿಗೆ ಸ್ವರ್ಥಿಸಲು ಸಾಧ್ಯವೇ ಎಂದು ಹೇಳಿದರು.

ದೇವರಾಜು ಅರಸು ನಂತರ ಹಿಂದುಳಿದ ವರ್ಗಗಳ ಹರಿಕಾರ ಎಂದು ಕರೆಸಿಕೊಳ್ಳುವ ಸಿದ್ದರಾಮಯ್ಯನವರ ಕಣ್ಣಿಗೆ ಪೊರೆ ಬಂದಿದೇಯಾ, ಒಳ ಮೀಸಲಾತಿ ಕಾನೂನು ಆಗುವ ಮುನ್ನವೇ ಅಲೆಮಾರಿಗಳನ್ನ ಪವರ್ಗ 1ಕ್ಕೆ ಸೇರಿಸ ಬೇಕು, ಸೇರಿಸದಿದ್ದಾರೆ ಹೋರಾಟ ಮಾಡುವುದಾಗಿ ಹೇಳಿದರು.

ಹನುಮಯ್ಯ ಅಪ್ಪಕಾರನಹಳ್ಳಿ ಮಾತನಾಡಿ, ಪರಿಶಿಷ್ಟ ಜಾತಿಗಳಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ ಹೆಚ್ಚಿದೆ, ಆದರೆ ನಮಗೆ ಸಿಗಬೇಕಾದ ಪಾಲು ನಮಗೆ ಸಿಕ್ಕಿಲ್ಲ, ಶೇಕಡಾ 1 ರಷ್ಟು ಕಡಿಮೆ ಮೀಸಲಾತಿ ಸಿಕ್ಕಿರುವುದು ವೈಯಕ್ತಿವಾಗಿ ನನಗೆ ಬಹಳ ನೋವಿದೆ. 35 ವರ್ಷಗಳ ಕಾಲ ಒಳ ಮೀಸಲಾತಿಗಾಗಿ ಹೋರಾಟ ಮಾಡಿದ ಹೋರಾಟಗಾರರಿಗೆ ನಾವು ಕೃತಜ್ಞತೆ ಸಲ್ಲಿಸಬೇಕು, ನಮ್ಮ ಅವಿರತ ಹೋರಾಟದ ಫಲ ಸರ್ಕಾರ ಒಳ ಮೀಸಲಾತಿಯನ್ನ ಜಾರಿ ಮಾಡಿದೆ ಎಂದರು.

ವೆಂಕಟೇಶ್ ಮಾತನಾಡಿ, ಒಳ ಮೀಸಲಾತಿಯ ಕೂಗು ಪ್ರಾರಂಭವಾಗಿದ್ದು ದಲಿತ ಮುಖಂಡರಾದ ಮಂದ ಕೃಷ್ಣ ಮಾದಿಗರವರಿಂದ, ರಾಜ್ಯದಲ್ಲಿ ಮಾದಿಗ ದಂಡೋರ ಹೋರಾಟಗಾರರ ಶ್ರಮದಿಂದ ಹೋರಾಟ ತೀರ್ವ ಸ್ವರೂಪವನ್ನ ಪಡೆಯಿತು, ಸ್ವಂತ ಕೆಲಸ ಬಿಟ್ಟು ಹೋರಾಟ ಮಾಡಿದ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ. ಕೆ.ಎಚ್.ಮುನಿಯಪ್ಪ. ಹೆಚ್.ಆಂಜನೇಯ, ಹಾಲ್ಕೋಡ್ ಹನುಮಂತಪ್ಪ, ನಾರಾಯಣಸ್ವಾಮಿಯವರ ಹೋರಾಟ ಸಹ ಒಳ ಮೀಸಲಾತಿ ಜಾರಿಯಾಗಲು ಕಾರಣವಾಗಿದೆ ಅವರಿಗೂ ಅಭಿನಂದನೆ ಸಲ್ಲಿಸುವುದ್ದಾಗಿ ಹೇಳಿದರು.

ವಕೀಲರು , ಕರ್ನಾಟಕ ಮಾದಾರ ಮಹಾಸಭಾ ತಾಲೂಕು ಸಂಚಾಲಕರಾದ ಕಾಂತರಾಜು ಮಾತನಾಡಿ, ಒಳ ಮೀಸಲಾತಿಗೆ ಕಳೆದ 35 ವರ್ಷಗಳ ಹೋರಾಟ ಮಾಡಿದ ಸಮುದಾಯ ಮತ್ತು ಮೂರು ದಿನ ಹೋರಾಟ ಮಾಡಿದ ಸಮುದಾಯಕ್ಕೆ ಸಮವಾಗಿ ಶೇಕಡಾ 6ರಷ್ಟು ಮೀಸಲಾತಿಯನ್ನ ನೀಡಿರುವುದು ಅನ್ಯಾಯ, ನಮ್ಮ ಹೋರಾಟದಲ್ಲಿ ಮಡಿದವರಿಗೆ ಸಿಕ್ಕ ಫಲವೇ ಇದು. ನಮಗೆ ಇದು ತೃಪ್ತಿ ನೀಡಿಲ್ಲ, ಮತ್ತೆ ಹೋರಾಟ ಮಾಡುವ ಶಕ್ತಿ ಇಲ್ಲದ ಕಾರಣಕ್ಕೆ ಇದನ್ನೇ ಒಪ್ಪಿಕೊಳ್ಳುತ್ತೇವೆ. ಅಲೆಮಾರಿಗಳ ಸಿಗಬೇಕಾದ 1ರಷ್ಟು ಮೀಸಲಾತಿಯನ್ನ ಕಿತ್ತುಕೊಳ್ಳಲಾಗಿದೆ, ಅವರಿಗೆ 1 ರಷ್ಟು ಮೀಸಲಾತಿಯನ್ನ ಕೊಡುವವರೆಗೂ ಮಾದಿಗ ಸಮುದಾಯ ಅವರೊಂದಿಗೆ ಇರುವುದ್ದಾಗಿ ಹೇಳಿದರು.

ರಾಮು ನೇರಳಘಟ್ಟ ಮಾತನಾಡಿ, ಒಳ ಮೀಸಲಾತಿಗಾಗಿ ಹೋರಾಟ ಮಾಡಿದ ಹೋರಾಟಗಾರರಿಗೆ ಗೌರವ ಸಲ್ಲಿಸುವೆ. ಸರ್ಕಾರ ಜಾರಿ ಮಾಡಿರುವ ಒಳ ಮೀಸಲಾತಿ ಅನ್ಯಾಯದಿಂದ ಕೂಡಿದೆ, ಅಲೆಮಾರಿಗಳಿಗೆ ಘೋರ ಅನ್ಯಾಯ ಮಾಡಲಾಗಿದೆ, ಅವರಿಗೆ ಒಳ ಮೀಸಲಾತಿ ಸಿಕ್ಕಾಗ ಮಾತ್ರ ನಾವು ಖುಷಿಯಿಂದ ಆಚರಿಸುತ್ತವೆ ಎಂದರು.

ತಳವಾರ ನಾಗರಾಜು ಮಾತನಾಡಿ, ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿಯನ್ನ ನೀಡದೆ, ಬಲಾಢ್ಯರ ಒತ್ತಡಕ್ಕೆ ಮಣಿದು ಒಳ ಮೀಸಲಾತಿಯನ್ನ ನೀಡಿರುವುದು ನಮಗೆ ಬಹಳ ನೋವು ತಂದಿದೆ, ನಮ್ಮ ಪಾಲು ನಮಗೆ ನೀಡಿದ್ದಾರೆ ನಮ್ಮ ಮಾದಿಗ ಸಮುದಾಯ ನಿಮ್ಮನ್ನು ರಾಜರಂತೆ ಮೇರೆಸುತ್ತಿದ್ದೇವು. ಅದರೆ ಸಂಭ್ರಮಾಚರಣೆ ಮಾಡುವ ಮನಸ್ಸು ನಮಗಿಲ್ಲ, ಈ ನೋವಿನಲ್ಲೇ ನಾವು ಒಳ ಮೀಸಲಾತಿಯನ್ನ ಒಪ್ಪಿಕೊಳ್ಳುತ್ತಿದ್ದೇವೆ ಎಂದರು.

ಟಿ.ಡಿ.ಮುನಿಯಪ್ಪ ಮಾತನಾಡಿ, ಸರ್ಕಾರ ಒಳ ಮೀಸಲಾತಿ ಜಾರಿ ಮಾಡಿರುವುದು ನಮಗೆ ಖುಷಿ ಇದೆ. ಆದರೆ ಖುಷಿಯಲ್ಲಿಯೂ ನೋವಿದೆ, ನಮ್ಮ ಪಾಲು ನಮಗೆ ಸಿಕ್ಕಿಲ್ಲ, ಸಿಕ್ಕಿರುವ ಪಾಲನ್ನು ನಾವು ಸ್ವೀಕರಿಸುತ್ತೇವೆ. ಒಳ ಮೀಸಲಾತಿಗಾಗಿ ಪಕ್ಷಾತೀತವಾಗಿ ಹೋರಾಟ ಮಾಡಿದ ರಾಜಕೀಯ ನಾಯಕರು, ಹೋರಾಟಗಾರರು ಮತ್ತು ಅಧಿಕಾರಿಗಳಿಗೆ ವಿಶೇಷ ಕೃತಜ್ಞತೆಯನ್ನ ಸಲ್ಲಿಸುತ್ತೇವೆ ಎಂದರು.

ಶಿವಣ್ಣ ಮಾತನಾಡಿ, ಜನಸಂಖ್ಯೆ ಆಧಾರದ ಮೇಲೆ ಸರ್ಕಾರ ಒಳ ಮೀಸಲಾತಿಯನ್ನ ಜಾರಿ ಮಾಡಿದೆ, ಸರ್ಕಾರಕ್ಕೆ ನಾವು ಅಭಿನಂದನೆ ಸಲ್ಲಿಸುತ್ತೇವೆ. ಸಚಿವರಾದ ಕೆ.ಎಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರರವರ ಶ್ರಮ ಸಹ ಇದೆ, ಒಳ ಮೀಸಲಾತಿಯನ್ನ ಜಾರಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವನ್ನ ದೊಡ್ಡಬಳ್ಳಾಪುರಕ್ಕೆ ಕರೆಸಿ ಅವರಿಗೆ ಸನ್ಮಾನಿಸುವ ಮೂಲಕ ನಾವು ಕೃತಜ್ಞತೆ ಸಲ್ಲಿಸಬೇಕೆಂದರು.

ಪತ್ರಿಕಾಗೋಷ್ಠಿಯಲ್ಲಿ ವೆಂಕಟೇಶ್ ದೊಡ್ಡತುಮಕೂರು, ಹನುಮಣ್ಣ ಅಪಕಾರನಹಳ್ಳಿ, ಟಿ ಡಿ ಮುನಿಯಪ್ಪ, ಗಂಗರಾಜು ನರಸಿಂಹನಹಳ್ಳಿ, ರಾಮು ನೇರಳಘಟ್ಟ, ನರಸಪ್ಪ ಗುಂಡುಮಗೆರೆ , ಮೈಲಾರಪ್ಪ ಎಸ್ ನಾಗೇನಹಳ್ಳಿ, ತಳವಾರ ನಾಗರಾಜು, ಕೆ ನಾರಾಯಣಪ್ಪ, ಹರ್ಷ ಹಾದ್ರಿಪುರ, ಕಾಂತರಾಜು ರಾಜಘಟ್ಟ, ಮುನಿಯಪ್ಪ ಕರೀಂ ಸೊಳ್ಳೆನಹಳ್ಳಿ, ಗಂಗರಾಜು ತಿಪ್ಪಾಪುರ ಇತರರು

Ramesh Babu

Journalist

Recent Posts

ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಸಂಭ್ರಮ

ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಪಟಾಕಿ ಸಿಡಿಸಿ, ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ…

10 hours ago

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

14 ವರ್ಷದ ಮಗಳನ್ನು ಕೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ... ಮಗಳು…

11 hours ago

ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ

ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ…

15 hours ago

ತಂದೆಯಿಂದಲೇ 6 ವರ್ಷದ ಮಗನ ಕೊಲೆ: ಕಾರಣ ಏನು ಗೊತ್ತಾ….?

ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ.‌ ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ…

15 hours ago

ಬಾಬಾ ಸಾಹೇಬ್ ಅಂಬೇಡ್ಕರ್ ಹಾದಿಯಲ್ಲಿ ನಾವು ಸಾಗಬೇಕು- ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ರೇಣುಕಾಮೂರ್ತಿ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ,…

18 hours ago

ಮನೆಯಲ್ಲಿ ವ್ಯಕ್ತಿ ನೇಣಿಗೆ ಶರಣು

ಮನೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಿನ್ನೆ (ಏ.13) ರಾತ್ರಿ ನಡೆದಿದೆ... ವಿನೋದ್ ಕುಮಾರ್(44),…

21 hours ago