ಬೆಂಗಳೂರು: ಹೋಳಿ ಗಮ್ಮತ್ತಿನಲ್ಲಿ ಕಂಠಪೂರ್ತಿ ಮದ್ಯ ಸೇವಿಸಿ ನಶೆ ತಲೆಗೇರಿಸಿಕೊಂಡಿದ್ದ ಬಿಹಾರ ಮೂಲದ ಆರು ಕಾರ್ಮಿಕರು ಪರಸ್ಪರ ಹೊಡೆದಾಡಿಕೊಂಡ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಸರ್ಜಾಪುರ – ಬಾಗಲೂರು(ತಮಿಳುನಾಡು) ಮುಖ್ಯ ರಸ್ತೆಯ ತಿಂಡ್ಲು ಅಪಾರ್ಟ್ಮೆಂಟ್ವೊಂದರಲ್ಲಿ ಶನಿವಾರ ನಡೆದಿದೆ.
ಮೃತ ದುರ್ದೈವಿಗಳನ್ನು ಬಿಹಾರ ಮೂಲದ ರಾಧೆಶ್ಯಾಮ್, ಕನ್ಸರ್, ದೀಪು ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಸರ್ಜಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಹೋಳಿ ಹಬ್ಬದ ರಜೆ ಇದ್ದ ಹಿನ್ನೆಲೆಯಲ್ಲಿ ಕೂಲಿ ಕೆಲಸಕ್ಕೆ ಬೆಂಗಳೂರಿಗೆ ಬಂದಿದ್ದ ಬಿಹಾರದ ಒಂದೇ ಗ್ರಾಮದ ವಾಸಿಗಳು ನಿನ್ನೆ ಎಣ್ಣೆ ಪಾರ್ಟಿ ಮಾಡಿದ್ದರು. ಈ ವೇಳೆ ಮಹಿಳೆ ವಿಚಾರಕ್ಕೆ ಗಲಾಟೆ ನಡೆದಿದೆ. ಕಂಠಪೂರ್ತಿ ಕುಡಿದು ಕೈಗೆ ಸಿಕ್ಕ ದೊಣ್ಣೆ ಮತ್ತು ರಾಡ್ನಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಲ್ಲೆ ವೇಳೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾದ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…