ಹೋಳಿ (ಕದರಿ) ಹುಣ್ಣಿಮೆ: ಭೋವಿ (ವಡ್ಡರ)ಪೇಟೆ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣ ಮಹೋತ್ಸವ

ನಗರದ 29ನೇ ಡಿವಿಜನ್ ಭೋವಿ (ವಡ್ಡರ)ಪೇಟೆಯಲ್ಲಿನ ಶ್ರೀ ಶ್ರೀ ಭೂನೀಳಾಸಮೇತ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೋಳಿ (ಕದರಿ) ಹುಣ್ಣಿಮೆ ಪ್ರಯುಕ್ತ ಮಾ.13, 14ರಂದು ಲೋಕಕಲ್ಯಾಣಾರ್ಥ ಶ್ರೀ ಭೂನೀಳಾಸಮೇತ “ಶ್ರೀ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ” ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ‌ ನೆರವೇರಿತು.

ಮಾ.13ರ ಬೆಳಿಗ್ಗೆ 6-00 ಗಂಟೆಗೆ ಸುಪ್ರಭಾತ ಸೇವೆ, ಶ್ರೀ ವಿಶ್ವಸೇನ ಪೂಜೆ, ಶ್ರೀ ಭಗವತ್ ವಾಸುದೇವ ಪುಣ್ಯಾಹ ವಾಚನ, ಶ್ರೀ ಮಹಾಲಕ್ಷ್ಮೀನರಸಿಂಹಸ್ವಾಮಿ ಪ್ರಧಾನ ಕಳಸ ಸ್ಥಾಪನೆ, ಸಕಲ ಇಷ್ಟಾರ್ಥ ಸಿದ್ದಿ ಶ್ರೀ ಲಕ್ಷ್ಮೀನರಸಿಂಹ ಪ್ರಧಾನ ಹೋಮ, ಮಹಾಸುದರ್ಶನ ಹೋಮ, ಶಾಂತಿ ಹೋಮ, ಪೂರ್ಣಾಹುತಿ ನಡೆಸಲಾಯಿತು‌.

ಮಧ್ಯಾಹ್ನ 12-30 ಗಂಟೆಗೆ ಮಂತ್ರ ಪುಷ್ಪ ಶಾತುಮುರೈ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಸಂಜೆ 6-00 ಗಂಟೆಗೆ ವೇದ-ಸ್ತೋತ್ರ-ಪ್ರಬಂಧ ಪಾರಾಯಣ ಶ್ರೀ ಮಹಾಲಕ್ಷ್ಮೀ ಪ್ರಧಾನ ಹೋಮ, ಮಹಾಪೂರ್ಣಾಹುತಿ ರಾತ್ರಿ 8-00 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.

ಮಾ.14ರ ಬೆಳಿಗ್ಗೆ 6-00 ಗಂಟೆಗೆ ಸುಪ್ರಭಾತ ಸೇವೆ, ಸ್ವಾಮಿಯವರಿಗೆ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಅಲಂಕಾರ. ಬೆಳಿಗ್ಗೆ 9-00 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆ, ಮಧ್ಯಾಹ್ನ 12-00 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ. ಲೋಕಕಲ್ಯಾಣಾರ್ಥ ಶ್ರೀ ಭೂನೀಳಾಸಮೇತ “ಶ್ರೀ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ”. ರಾತ್ರಿ 8ಕ್ಕೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ‌ ಏರ್ಪಡಿಸಲಾಗಿತ್ತು.

ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜ್ ಸೇರಿದಂತೆ ರಾಜಕೀಯ ಮುಖಂಡರು, ಸ್ಥಳೀಯ ನಿವಾಸಿಗಳು, ಭಕ್ತಾಧಿಗಳು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

4 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

4 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

4 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

5 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

6 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

10 hours ago