ನಗರದ 29ನೇ ಡಿವಿಜನ್ ಭೋವಿ (ವಡ್ಡರ)ಪೇಟೆಯಲ್ಲಿನ ಶ್ರೀ ಶ್ರೀ ಭೂನೀಳಾಸಮೇತ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೋಳಿ (ಕದರಿ) ಹುಣ್ಣಿಮೆ ಪ್ರಯುಕ್ತ ಮಾ.13, 14ರಂದು ಲೋಕಕಲ್ಯಾಣಾರ್ಥ ಶ್ರೀ ಭೂನೀಳಾಸಮೇತ “ಶ್ರೀ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ” ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ನೆರವೇರಿತು.
ಮಾ.13ರ ಬೆಳಿಗ್ಗೆ 6-00 ಗಂಟೆಗೆ ಸುಪ್ರಭಾತ ಸೇವೆ, ಶ್ರೀ ವಿಶ್ವಸೇನ ಪೂಜೆ, ಶ್ರೀ ಭಗವತ್ ವಾಸುದೇವ ಪುಣ್ಯಾಹ ವಾಚನ, ಶ್ರೀ ಮಹಾಲಕ್ಷ್ಮೀನರಸಿಂಹಸ್ವಾಮಿ ಪ್ರಧಾನ ಕಳಸ ಸ್ಥಾಪನೆ, ಸಕಲ ಇಷ್ಟಾರ್ಥ ಸಿದ್ದಿ ಶ್ರೀ ಲಕ್ಷ್ಮೀನರಸಿಂಹ ಪ್ರಧಾನ ಹೋಮ, ಮಹಾಸುದರ್ಶನ ಹೋಮ, ಶಾಂತಿ ಹೋಮ, ಪೂರ್ಣಾಹುತಿ ನಡೆಸಲಾಯಿತು.
ಮಧ್ಯಾಹ್ನ 12-30 ಗಂಟೆಗೆ ಮಂತ್ರ ಪುಷ್ಪ ಶಾತುಮುರೈ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಸಂಜೆ 6-00 ಗಂಟೆಗೆ ವೇದ-ಸ್ತೋತ್ರ-ಪ್ರಬಂಧ ಪಾರಾಯಣ ಶ್ರೀ ಮಹಾಲಕ್ಷ್ಮೀ ಪ್ರಧಾನ ಹೋಮ, ಮಹಾಪೂರ್ಣಾಹುತಿ ರಾತ್ರಿ 8-00 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.
ಮಾ.14ರ ಬೆಳಿಗ್ಗೆ 6-00 ಗಂಟೆಗೆ ಸುಪ್ರಭಾತ ಸೇವೆ, ಸ್ವಾಮಿಯವರಿಗೆ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಅಲಂಕಾರ. ಬೆಳಿಗ್ಗೆ 9-00 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆ, ಮಧ್ಯಾಹ್ನ 12-00 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ. ಲೋಕಕಲ್ಯಾಣಾರ್ಥ ಶ್ರೀ ಭೂನೀಳಾಸಮೇತ “ಶ್ರೀ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ”. ರಾತ್ರಿ 8ಕ್ಕೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.
ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜ್ ಸೇರಿದಂತೆ ರಾಜಕೀಯ ಮುಖಂಡರು, ಸ್ಥಳೀಯ ನಿವಾಸಿಗಳು, ಭಕ್ತಾಧಿಗಳು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…