₹150 ಕೋಟಿ ಬೆಲೆ ಬಾಳುವ ಜಮೀನು ಸರ್ಕಾರದ ವಶಕ್ಕೆ – “ಕೊಟ್ಟೋನು ಕೋಡಂಗಿ ಇಸ್ಕೋಂಡೋನು ಈರಭದ್ರ”

ದೊಡ್ಡಬಳ್ಳಾಪುರ: ತಹಶೀಲ್ದಾರ್ ನೀಡಿದ ವರದಿಯ ಆಧಾರದ ಮೇಲೆ ವಿಚಾರಣೆ ನಡೆಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಾಲ್ಲೂಕಿನ ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಆಹಾರ ಧಾನ್ಯ ಉತ್ಪಾದನೆ ಸಲುವಾಗಿ ರೈತರಿಗೆ ಜಿಎಂಎಫ್ ಯೋಜನೆಯಡಿ ಹಂಗಾಮಿಯಾಗಿ ಸಾಗುವಳಿ ಚೀಟಿ ನೀಡಲಾಗಿದ್ದ ಸುಮಾರು 38 ಎಕರೆ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಜೂನ್ 18 ರಂದು ಆದೇಶ ಮಾಡಿದ್ದಾರೆ.

ಜಿಎಂಎಫ್ ಯೋಜನೆಯಲ್ಲಿ ರೈತರಿಗೆ ಸರ್ಕಾರದಿಂದ ಮಂಜೂರಾಗಿರುವ ಜಮೀನುಗಳು ಕಾನೂನಾತ್ಮಕವಾಗಿ ವಹಿವಾಟು ಆಗದೇ ಇರುವುದರಿಂದ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವುದು ಅವಶ್ಯಕವಾಗಿದೆ. ಹಾಗಾಗಿ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ಪಡೆಯಲು ದೊಡ್ಡಬಳ್ಳಾಪುರ ತಹಶೀಲ್ದಾರ್ ಅವರಿಗೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಸರ್ಕಾರದ ವಶಕ್ಕೆ ಪಡೆಯಲಾಗುತ್ತಿರುವ ಈ ಜಮೀನು ಈಗಿನ ಮಾರುಕಟ್ಟೆ ಬೆಲೆಯಲ್ಲಿ ಸುಮಾರು ₹150 ಕೋಟಿ ಬೆಲೆ ಬಾಳಬಹುದು ಎಂದು ಅಂದಾಜಿಸಲಾಗಿದೆ. ಹುಲಿಕುಂಟೆ ಸಮೀಪ ಸರ್ಕಾರ ವಶಕ್ಕೆ ಪಡೆಯುತ್ತಿರುವ ಈ ಜಮೀನಿನ ಸುತ್ತಲು ಈಗಾಗಲೇ ಕೆಎಐಡಿಬಿ ಕ್ವಿನ್ ಸಿಟಿ ಹಾಗೂ ಹೈಟೆಕ್ ಲಾಜಿಸ್ಟಿಕ್ ಪಾರ್ಕ್ ಸ್ಥಾಪನೆಗಾಗಿ ಸುಮಾರು 2 ಸಾವಿರ ಎಕರೆ ಭೂಸ್ವಾಧೀನ ಮಾಡಿಕೊಂಡಿದೆ.

ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ಕ್ಕೆ ಸಂಬಂಧಿಸಿದಂತೆ ನಡೆದಿರಬಹುದಾದ ಅಕ್ರಮ ವಹಿವಾಟಿನ ಕುರಿತು ತನಿಖೆ ನಡೆಸಿ 15 ದಿನಗಳ ಒಳಗೆ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂರು ಜನರ ಸಮಿತಿ ರಚಿಸಿ ಜೂನ್ 13 ರಂದು ಕಂದಾಯ ಇಲಾಖೆಯ(ವಿಶೇಷ ಕೋಶ) ಅಧೀನ ಕಾರ್ಯದರ್ಶಿ ಕೆ.ಎಸ್.ಶೈಲಶ್ರೀ ಅವರು ಸಹ ಆದೇಶ ಹೊರಡಿಸಿದ್ದಾರೆ.

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

11 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

13 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

15 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

16 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

22 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

23 hours ago