₹150 ಕೋಟಿ ಬೆಲೆ ಬಾಳುವ ಜಮೀನು ಸರ್ಕಾರದ ವಶಕ್ಕೆ – “ಕೊಟ್ಟೋನು ಕೋಡಂಗಿ ಇಸ್ಕೋಂಡೋನು ಈರಭದ್ರ”

ದೊಡ್ಡಬಳ್ಳಾಪುರ: ತಹಶೀಲ್ದಾರ್ ನೀಡಿದ ವರದಿಯ ಆಧಾರದ ಮೇಲೆ ವಿಚಾರಣೆ ನಡೆಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಾಲ್ಲೂಕಿನ ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಆಹಾರ ಧಾನ್ಯ ಉತ್ಪಾದನೆ ಸಲುವಾಗಿ ರೈತರಿಗೆ ಜಿಎಂಎಫ್ ಯೋಜನೆಯಡಿ ಹಂಗಾಮಿಯಾಗಿ ಸಾಗುವಳಿ ಚೀಟಿ ನೀಡಲಾಗಿದ್ದ ಸುಮಾರು 38 ಎಕರೆ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಜೂನ್ 18 ರಂದು ಆದೇಶ ಮಾಡಿದ್ದಾರೆ.

ಜಿಎಂಎಫ್ ಯೋಜನೆಯಲ್ಲಿ ರೈತರಿಗೆ ಸರ್ಕಾರದಿಂದ ಮಂಜೂರಾಗಿರುವ ಜಮೀನುಗಳು ಕಾನೂನಾತ್ಮಕವಾಗಿ ವಹಿವಾಟು ಆಗದೇ ಇರುವುದರಿಂದ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವುದು ಅವಶ್ಯಕವಾಗಿದೆ. ಹಾಗಾಗಿ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ಪಡೆಯಲು ದೊಡ್ಡಬಳ್ಳಾಪುರ ತಹಶೀಲ್ದಾರ್ ಅವರಿಗೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಸರ್ಕಾರದ ವಶಕ್ಕೆ ಪಡೆಯಲಾಗುತ್ತಿರುವ ಈ ಜಮೀನು ಈಗಿನ ಮಾರುಕಟ್ಟೆ ಬೆಲೆಯಲ್ಲಿ ಸುಮಾರು ₹150 ಕೋಟಿ ಬೆಲೆ ಬಾಳಬಹುದು ಎಂದು ಅಂದಾಜಿಸಲಾಗಿದೆ. ಹುಲಿಕುಂಟೆ ಸಮೀಪ ಸರ್ಕಾರ ವಶಕ್ಕೆ ಪಡೆಯುತ್ತಿರುವ ಈ ಜಮೀನಿನ ಸುತ್ತಲು ಈಗಾಗಲೇ ಕೆಎಐಡಿಬಿ ಕ್ವಿನ್ ಸಿಟಿ ಹಾಗೂ ಹೈಟೆಕ್ ಲಾಜಿಸ್ಟಿಕ್ ಪಾರ್ಕ್ ಸ್ಥಾಪನೆಗಾಗಿ ಸುಮಾರು 2 ಸಾವಿರ ಎಕರೆ ಭೂಸ್ವಾಧೀನ ಮಾಡಿಕೊಂಡಿದೆ.

ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ಕ್ಕೆ ಸಂಬಂಧಿಸಿದಂತೆ ನಡೆದಿರಬಹುದಾದ ಅಕ್ರಮ ವಹಿವಾಟಿನ ಕುರಿತು ತನಿಖೆ ನಡೆಸಿ 15 ದಿನಗಳ ಒಳಗೆ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂರು ಜನರ ಸಮಿತಿ ರಚಿಸಿ ಜೂನ್ 13 ರಂದು ಕಂದಾಯ ಇಲಾಖೆಯ(ವಿಶೇಷ ಕೋಶ) ಅಧೀನ ಕಾರ್ಯದರ್ಶಿ ಕೆ.ಎಸ್.ಶೈಲಶ್ರೀ ಅವರು ಸಹ ಆದೇಶ ಹೊರಡಿಸಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

5 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

6 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

10 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

14 hours ago