ದೊಡ್ಡಬಳ್ಳಾಪುರ: ತಹಶೀಲ್ದಾರ್ ನೀಡಿದ ವರದಿಯ ಆಧಾರದ ಮೇಲೆ ವಿಚಾರಣೆ ನಡೆಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಾಲ್ಲೂಕಿನ ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಆಹಾರ ಧಾನ್ಯ ಉತ್ಪಾದನೆ ಸಲುವಾಗಿ ರೈತರಿಗೆ ಜಿಎಂಎಫ್ ಯೋಜನೆಯಡಿ ಹಂಗಾಮಿಯಾಗಿ ಸಾಗುವಳಿ ಚೀಟಿ ನೀಡಲಾಗಿದ್ದ ಸುಮಾರು 38 ಎಕರೆ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಜೂನ್ 18 ರಂದು ಆದೇಶ ಮಾಡಿದ್ದಾರೆ.
ಜಿಎಂಎಫ್ ಯೋಜನೆಯಲ್ಲಿ ರೈತರಿಗೆ ಸರ್ಕಾರದಿಂದ ಮಂಜೂರಾಗಿರುವ ಜಮೀನುಗಳು ಕಾನೂನಾತ್ಮಕವಾಗಿ ವಹಿವಾಟು ಆಗದೇ ಇರುವುದರಿಂದ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವುದು ಅವಶ್ಯಕವಾಗಿದೆ. ಹಾಗಾಗಿ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ಪಡೆಯಲು ದೊಡ್ಡಬಳ್ಳಾಪುರ ತಹಶೀಲ್ದಾರ್ ಅವರಿಗೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಸರ್ಕಾರದ ವಶಕ್ಕೆ ಪಡೆಯಲಾಗುತ್ತಿರುವ ಈ ಜಮೀನು ಈಗಿನ ಮಾರುಕಟ್ಟೆ ಬೆಲೆಯಲ್ಲಿ ಸುಮಾರು ₹150 ಕೋಟಿ ಬೆಲೆ ಬಾಳಬಹುದು ಎಂದು ಅಂದಾಜಿಸಲಾಗಿದೆ. ಹುಲಿಕುಂಟೆ ಸಮೀಪ ಸರ್ಕಾರ ವಶಕ್ಕೆ ಪಡೆಯುತ್ತಿರುವ ಈ ಜಮೀನಿನ ಸುತ್ತಲು ಈಗಾಗಲೇ ಕೆಎಐಡಿಬಿ ಕ್ವಿನ್ ಸಿಟಿ ಹಾಗೂ ಹೈಟೆಕ್ ಲಾಜಿಸ್ಟಿಕ್ ಪಾರ್ಕ್ ಸ್ಥಾಪನೆಗಾಗಿ ಸುಮಾರು 2 ಸಾವಿರ ಎಕರೆ ಭೂಸ್ವಾಧೀನ ಮಾಡಿಕೊಂಡಿದೆ.
ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ಕ್ಕೆ ಸಂಬಂಧಿಸಿದಂತೆ ನಡೆದಿರಬಹುದಾದ ಅಕ್ರಮ ವಹಿವಾಟಿನ ಕುರಿತು ತನಿಖೆ ನಡೆಸಿ 15 ದಿನಗಳ ಒಳಗೆ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂರು ಜನರ ಸಮಿತಿ ರಚಿಸಿ ಜೂನ್ 13 ರಂದು ಕಂದಾಯ ಇಲಾಖೆಯ(ವಿಶೇಷ ಕೋಶ) ಅಧೀನ ಕಾರ್ಯದರ್ಶಿ ಕೆ.ಎಸ್.ಶೈಲಶ್ರೀ ಅವರು ಸಹ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…