₹7.11 ಕೋಟಿ ಬೃಹತ್ ಹಗಲು ದರೋಡೆ ಪ್ರಕರಣ: ದರೋಡೆ ಎಸಗಿದ ಶಂಕಿತ ಆರೋಪಿಗಳಲ್ಲಿ ಆರು ಜನರ ಫೋಟೋ ಬಿಡುಗಡೆ

ಬೆಂಗಳೂರಿನ ಜಯದೇವ ಡೇರಿ ಸರ್ಕಲ್‌ನಲ್ಲಿ ನಿನ್ನೆ (ನ. 19) ಮಧ್ಯಾಹ್ನ ನಡೆದ ₹7.11 ಕೋಟಿ ಬೃಹತ್ ಹಗಲು ದರೋಡೆ ಪ್ರಕರಣದಲ್ಲಿ ಇದೀಗ ದೊಡ್ಡ ಬೆಳವಣಿಗೆ ಉಂಟಾಗಿದೆ. ದರೋಡೆ ಎಸಗಿದ ಶಂಕಿತ ಆರೋಪಿಗಳಲ್ಲಿ ಆರು ಜನರ ಸ್ಪಷ್ಟ ಫೋಟೋಗಳನ್ನು ಬೆಂಗಳೂರು ಪೊಲೀಸರು ಪಡೆದಿದ್ದಾರೆ. ಈ ಎಕ್ಸ್‌ಕ್ಲೂಸಿವ್ ಫೋಟೋಗಳನ್ನು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಕಳುಹಿಸಲಾಗಿದ್ದು,  ಆರೋಪಿಗಳನ್ನ ಎಲ್ಲಾದರೂ ಕಂಡರೆ ಕೂಡಲೇ ಪೊಲೀಸರಿಗೆ ತಿಳಿಸಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಸಿಸಿಟಿವಿ ದೃಶ್ಯಗಳು ಮತ್ತು ಸ್ಥಳೀಯ ಮೂಲಗಳಿಂದ ಪಡೆದ ಮಾಹಿತಿಯ ಆಧಾರದಲ್ಲಿ ಈ ಆರು ಶಂಕಿತರ ಫೋಟೋಗಳನ್ನು ಗುರುತಿಸಲಾಗಿದೆ. ದರೋಡೆ ದಿನದಂದು ಬಿಳಿ ಬಣ್ಣದ ಎರಡು ಇನ್ನೋವಾ ಕ್ರಿಸ್ಟಾ ಕಾರುಗಳಲ್ಲಿ ಬಂದಿದ್ದ ಗ್ಯಾಂಗ್‌ನಲ್ಲಿ ಒಟ್ಟು 7-8 ಜನ ಇದ್ದರು ಎಂದು ಪೊಲೀಸರು ಅಂದಾಜಿಸಿದ್ದಾರೆ. ಈ ಪೈಕಿ ಆರು ಜನರ ಫೋಟೋಗಳು ಲಭ್ಯವಾಗಿದ್ದು, ಉಳಿದವರ ಗುರುತು ಪತ್ತೆ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ.

ಮುಖಕ್ಕೆ ಮಾಸ್ಕ್ ಧರಿಸಿದ್ದರೂ ಸಿಸಿಟಿವಿಯಲ್ಲಿ ದೃಶ್ಯದಲ್ಲಿ ಕಾಣಿಸಿದಂತೆ 30-35 ವಯಸ್ಸಿನವರಾಗಿದ್ದಾರೆ. ಮತ್ತೊಬ್ಬ ಕೈಯಲ್ಲಿ ಕತ್ತಿ ಹಿಡಿದಿದ್ದ 28-32 ವಯಸ್ಸಿನ ವ್ಯಕ್ತಿಯಾಗಿದ್ದಾನೆ. ದರೋಡೆಯ ಸಮಯದಲ್ಲಿ ಕ್ಯಾಶ್ ವ್ಯಾನ್ ಬಳಿ 35-40 ವಯಸ್ಸಿನ ವ್ಯಕ್ತಿ ನಿಂತ್ತಿದ್ದಾನೆ. ಇನ್ನೋವಾ ಕಾರಿನ ಚಾಲಕ ಸ್ಥಾನದಲ್ಲಿ ಕಂಡಿದ್ದ 30ರ ವ್ಯಕ್ತಿ. ಎಸ್ಕೇಪ್ ಆಗುವಾಗ ಇನ್ನೋವಾ ಕಾರಿನಲ್ಲಿ ಕಂಡ ಇಬ್ಬರು ಯುವಕರು ಒಟ್ಟು 6 ರಿಂದ 7 ಮಂದಿ ಕೃತ್ಯದಲ್ಲಿ ಬಾಗಿಯಾಗಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ.

ಈ ಆರು ಜನರ ಫೋಟೋಗಳನ್ನು ಬೆಂಗಳೂರು ಪೊಲೀಸ್ ಆಯುಕ್ತ ಕಚೇರಿ ಅಧಿಕೃತ ಎಕ್ಸ್ (ಟ್ವಿಟರ್) ಹ್ಯಾಂಡಲ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

 ಯಾರಿಗಾದರೂ ಈ ವ್ಯಕ್ತಿಗಳ ಬಗ್ಗೆ ಯಾವುದೇ ಮಾಹಿತಿ ಇದ್ದರೆ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಅಥವಾ 112ಗೆ ಕರೆ ಮಾಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ. ಮಾಹಿತಿ ನೀಡುವವರ ಹೆಸರು ಗೌಪ್ಯವಾಗಿ ಇರಿಸಲಾಗುವುದು ಮತ್ತು ರಿವಾರ್ಡ್ ಘೋಷಿಸುವ ಸಾಧ್ಯತೆಯೂ ಇದೆ ಎಂದು ತಿಳಿದುಬಂದಿದೆ.

ದರೋಡೆ ನಡೆದ 48 ಗಂಟೆಗಳೊಳಗೇ ಈ ಫೋಟೋಗಳು ಲಭ್ಯವಾಗಿರುವುದು ಪೊಲೀಸರಿಗೆ ದೊಡ್ಡ ಬ್ರೇಕ್ ಥ್ರೂ ಎನ್ನಲಾಗುತ್ತಿದೆ. ಆದರೆ ಇನ್ನೂ ಆರೋಪಿಗಳನ್ನು ಬಂಧಿಸದಿರುವುದು ಆತಂಕ ಮೂಡಿಸಿದೆ. ಈ ಗ್ಯಾಂಗ್ ರಾಜ್ಯದಿಂದ ಹೊರಗೆ ತೆರಳಿರುವ ಸಾಧ್ಯತೆ ಇದ್ದು, ತಮಿಳುನಾಡು, ಕೇರಳ, ಮಹಾರಾಷ್ಟ್ರ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

4 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

12 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

23 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago