₹7.11 ಕೋಟಿ ಬೃಹತ್ ಹಗಲು ದರೋಡೆ ಪ್ರಕರಣ: ದರೋಡೆ ಎಸಗಿದ ಶಂಕಿತ ಆರೋಪಿಗಳಲ್ಲಿ ಆರು ಜನರ ಫೋಟೋ ಬಿಡುಗಡೆ

ಬೆಂಗಳೂರಿನ ಜಯದೇವ ಡೇರಿ ಸರ್ಕಲ್‌ನಲ್ಲಿ ನಿನ್ನೆ (ನ. 19) ಮಧ್ಯಾಹ್ನ ನಡೆದ ₹7.11 ಕೋಟಿ ಬೃಹತ್ ಹಗಲು ದರೋಡೆ ಪ್ರಕರಣದಲ್ಲಿ ಇದೀಗ ದೊಡ್ಡ ಬೆಳವಣಿಗೆ ಉಂಟಾಗಿದೆ. ದರೋಡೆ ಎಸಗಿದ ಶಂಕಿತ ಆರೋಪಿಗಳಲ್ಲಿ ಆರು ಜನರ ಸ್ಪಷ್ಟ ಫೋಟೋಗಳನ್ನು ಬೆಂಗಳೂರು ಪೊಲೀಸರು ಪಡೆದಿದ್ದಾರೆ. ಈ ಎಕ್ಸ್‌ಕ್ಲೂಸಿವ್ ಫೋಟೋಗಳನ್ನು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಕಳುಹಿಸಲಾಗಿದ್ದು,  ಆರೋಪಿಗಳನ್ನ ಎಲ್ಲಾದರೂ ಕಂಡರೆ ಕೂಡಲೇ ಪೊಲೀಸರಿಗೆ ತಿಳಿಸಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಸಿಸಿಟಿವಿ ದೃಶ್ಯಗಳು ಮತ್ತು ಸ್ಥಳೀಯ ಮೂಲಗಳಿಂದ ಪಡೆದ ಮಾಹಿತಿಯ ಆಧಾರದಲ್ಲಿ ಈ ಆರು ಶಂಕಿತರ ಫೋಟೋಗಳನ್ನು ಗುರುತಿಸಲಾಗಿದೆ. ದರೋಡೆ ದಿನದಂದು ಬಿಳಿ ಬಣ್ಣದ ಎರಡು ಇನ್ನೋವಾ ಕ್ರಿಸ್ಟಾ ಕಾರುಗಳಲ್ಲಿ ಬಂದಿದ್ದ ಗ್ಯಾಂಗ್‌ನಲ್ಲಿ ಒಟ್ಟು 7-8 ಜನ ಇದ್ದರು ಎಂದು ಪೊಲೀಸರು ಅಂದಾಜಿಸಿದ್ದಾರೆ. ಈ ಪೈಕಿ ಆರು ಜನರ ಫೋಟೋಗಳು ಲಭ್ಯವಾಗಿದ್ದು, ಉಳಿದವರ ಗುರುತು ಪತ್ತೆ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ.

ಮುಖಕ್ಕೆ ಮಾಸ್ಕ್ ಧರಿಸಿದ್ದರೂ ಸಿಸಿಟಿವಿಯಲ್ಲಿ ದೃಶ್ಯದಲ್ಲಿ ಕಾಣಿಸಿದಂತೆ 30-35 ವಯಸ್ಸಿನವರಾಗಿದ್ದಾರೆ. ಮತ್ತೊಬ್ಬ ಕೈಯಲ್ಲಿ ಕತ್ತಿ ಹಿಡಿದಿದ್ದ 28-32 ವಯಸ್ಸಿನ ವ್ಯಕ್ತಿಯಾಗಿದ್ದಾನೆ. ದರೋಡೆಯ ಸಮಯದಲ್ಲಿ ಕ್ಯಾಶ್ ವ್ಯಾನ್ ಬಳಿ 35-40 ವಯಸ್ಸಿನ ವ್ಯಕ್ತಿ ನಿಂತ್ತಿದ್ದಾನೆ. ಇನ್ನೋವಾ ಕಾರಿನ ಚಾಲಕ ಸ್ಥಾನದಲ್ಲಿ ಕಂಡಿದ್ದ 30ರ ವ್ಯಕ್ತಿ. ಎಸ್ಕೇಪ್ ಆಗುವಾಗ ಇನ್ನೋವಾ ಕಾರಿನಲ್ಲಿ ಕಂಡ ಇಬ್ಬರು ಯುವಕರು ಒಟ್ಟು 6 ರಿಂದ 7 ಮಂದಿ ಕೃತ್ಯದಲ್ಲಿ ಬಾಗಿಯಾಗಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ.

ಈ ಆರು ಜನರ ಫೋಟೋಗಳನ್ನು ಬೆಂಗಳೂರು ಪೊಲೀಸ್ ಆಯುಕ್ತ ಕಚೇರಿ ಅಧಿಕೃತ ಎಕ್ಸ್ (ಟ್ವಿಟರ್) ಹ್ಯಾಂಡಲ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

 ಯಾರಿಗಾದರೂ ಈ ವ್ಯಕ್ತಿಗಳ ಬಗ್ಗೆ ಯಾವುದೇ ಮಾಹಿತಿ ಇದ್ದರೆ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಅಥವಾ 112ಗೆ ಕರೆ ಮಾಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ. ಮಾಹಿತಿ ನೀಡುವವರ ಹೆಸರು ಗೌಪ್ಯವಾಗಿ ಇರಿಸಲಾಗುವುದು ಮತ್ತು ರಿವಾರ್ಡ್ ಘೋಷಿಸುವ ಸಾಧ್ಯತೆಯೂ ಇದೆ ಎಂದು ತಿಳಿದುಬಂದಿದೆ.

ದರೋಡೆ ನಡೆದ 48 ಗಂಟೆಗಳೊಳಗೇ ಈ ಫೋಟೋಗಳು ಲಭ್ಯವಾಗಿರುವುದು ಪೊಲೀಸರಿಗೆ ದೊಡ್ಡ ಬ್ರೇಕ್ ಥ್ರೂ ಎನ್ನಲಾಗುತ್ತಿದೆ. ಆದರೆ ಇನ್ನೂ ಆರೋಪಿಗಳನ್ನು ಬಂಧಿಸದಿರುವುದು ಆತಂಕ ಮೂಡಿಸಿದೆ. ಈ ಗ್ಯಾಂಗ್ ರಾಜ್ಯದಿಂದ ಹೊರಗೆ ತೆರಳಿರುವ ಸಾಧ್ಯತೆ ಇದ್ದು, ತಮಿಳುನಾಡು, ಕೇರಳ, ಮಹಾರಾಷ್ಟ್ರ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

7 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

8 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago