₹8 ಲಕ್ಷ ಮೌಲ್ಯದ ಚರಸ್ ಜಪ್ತಿ; ಆರೋಪಿ ಬಂಧನ

ಮುಂಡಗೋಡ: ಅಕ್ರಮವಾಗಿ ಮಾದಕ ವಸ್ತುವಾದ ಚರಸ್ ಅನ್ನು ಬೈಕ್‌ನಲ್ಲಿ ಸಾಗಿಸುತ್ತಿದ್ದ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಮುಂಡಗೋಡ ಪಟ್ಟಣದ ಸುಭಾಷನಗರ ನಿವಾಸಿ ಸಚೀನ ಟೆಕ್‌ಬಹದ್ದೂರ ಗೋರ್ಖಾ ಬಂಧಿತ ಆರೋಪಿ.
ಆರೋಪಿ ಸಚೀನನು ಯಾವುದೇ ಅಧಿಕೃತ ಪಾಸ್ ಅಥವಾ ಪರವಾನಗಿ ಇಲ್ಲದೇ, ಲಾಭ ಗಳಿಸುವ ಉದ್ದೇಶದಿಂದ ಚರಸ್ ಅನ್ನು ಮಾರಾಟ ಮಾಡಲು ಹಿರೋ ಸ್ಪ್ಲೆಂಡರ್ ಬೈಕ್‌ನಲ್ಲಿ ಸಾಗಿಸುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಪಟ್ಟಣದ ಶಿರಸಿ-ಹುಬ್ಬಳ್ಳಿ ರಾಜ್ಯ ಹೆದ್ದಾರಿ-69 ರ ಕೆ.ಎಸ್.ಆರ್.ಟಿ.ಸಿ (KSRTC) ಬಸ್ ಡಿಪೋ ಹತ್ತಿರ ಆರೋಪಿಯನ್ನು ತಡೆದು ಪರಿಶೀಲಿಸಿದ್ದಾರೆ.

ಈ ವೇಳೆ ಆರೋಪಿಯ ಬಳಿ ಸುಮಾರು 781 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತುವಾದ ಚರಸ್ ಪತ್ತೆಯಾಗಿದೆ. ಇದರ ಮೌಲ್ಯ ಸುಮಾರು ₹8,00,000 (ಎಂಟು ಲಕ್ಷ ರೂಪಾಯಿ) ಎಂದು ಅಂದಾಜಿಸಲಾಗಿದೆ.
ಪೊಲೀಸರು ಮಾದಕ ವಸ್ತು ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ಜಪ್ತಿ ಮಾಡಿದ್ದಾರೆ.

ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷರಾದ ರಂಗನಾಥ ನೀಲಮ್ಮನವರ ನೇತೃತ್ವದಲ್ಲಿ ಪಿ.ಎಸ್.ಐ ಯಲ್ಲಾಲಿಂಗ ಕುನ್ನುರ, ಸಿಬ್ಬಂದಿಗಳಾದ ಕೋಟೇಶ ನಾಗರೊಳ್ಳಿ, ಮಹಾಂತೇಶ ಕುಂದೋಳ, ಅಣ್ಣಪ್ಪ ಬಡಿಗೇರ, ಶಿವಾನಂದ ದಾನಣ್ಣನವರ, ಅನ್ವರ್ ಬಮ್ಮಿಗಟ್ಟಿ, ಗುರು ಬಿಶಟ್ಟಪ್ಪನವರ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಏನಿದು ಚರಸ್?
​’ಚರಸ್’ (Charas) ಎಂಬುದು ಗಾಂಜಾ ಗಿಡದ ಹೂವು ಮತ್ತು ಎಲೆಗಳಿಂದ ತೆಗೆಯಲಾದ ಒಂದು ಬಗೆಯ ಅಂಟು (ರಾಳ). ಕಪ್ಪು ಅಥವಾ ಕಂದು ಬಣ್ಣದಲ್ಲಿರುವ ಇದು ಗಾಂಜಾಕ್ಕಿಂತ ಹೆಚ್ಚು ನಶೆ ನೀಡುವ ತೀಕ್ಷ್ಣ ಮಾದಕ ವಸ್ತು. ಇದು ನೇರವಾಗಿ ಮನುಷ್ಯನ ಮೆದುಳು ಮತ್ತು ನರಮಂಡಲದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಅತ್ಯಂತ ಅಪಾಯಕಾರಿಯಾಗಿದೆ. ಭಾರತದಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಚರಸ್ ಸಾಗಾಟ, ಸಂಗ್ರಹಣೆ ಮತ್ತು ಮಾರಾಟ ಶಿಕ್ಷಾರ್ಹ ಅಪರಾಧವಾಗಿದೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

11 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago