0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೀಡಿದ ಪ್ರಮುಖ ನಿರ್ದೇಶನಗಳನ್ನು ಮಾಧ್ಯಮಗೋಷ್ಠಿಯಲ್ಲಿ ಹಂಚಿಕೊಂಡರು:

ಪ್ರಮುಖ ನಿರ್ದೇಶನಗಳ ವಿವರ

• ಟೀಮ್ ಕರ್ನಾಟಕ: ನಾವೆಲ್ಲರೂ ಒಂದೇ ತಂಡ, ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ. ಸಮಸ್ಯೆಯೊಂದಿಗೆ ಬಂದ ಜನರಿಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಅಧಿಕಾರಿಗಳ ವರ್ಗದಲ್ಲಿ ನಾವು ಸಾಮಾಜಿಕ ನ್ಯಾಯವನ್ನು ಪಾಲಿಸುತ್ತೇವೆ.

• 0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು. ನಾವು ಭ್ರಷ್ಟಾಚಾರ ಮುಕ್ತ ಕರ್ನಾಟಕ ನಿರ್ಮಿಸೋಣ. ಯಾರಾದರೂ ಕಾನೂನು ವಿರುದ್ಧ ಕೆಲಸ ಮಾಡಲು ಒತ್ತಡ ಹಾಕಲು ಬಂದರೆ ಕೂಡಲೇ ನನಗೆ ಮಾಹಿತಿ ನೀಡಬೇಕು.

• ರೌಡಿಸಂ & ಡ್ರಗ್ಸ್ ಮುಕ್ತ: ಗಾಂಜಾ, ಡ್ರಗ್ಸ್ ಹಾಗೂ ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಪ್ರತಿ ಪೊಲೀಸ್ ಠಾಣೆಯಲ್ಲಿ ಐದು ಪೊಲೀಸರ ತಂಡವನ್ನು ರಚಿಸಿ ರೌಡಿಸಂ ನಿಗ್ರಹಕ್ಕೆ ಸೂಚಿಸಿದ್ದೇನೆ. ನಕಲಿ ಫೈನಾನ್ಸ್‌ಗಳ ಹಾವಳಿಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು.

• ಶಿಕ್ಷಣಕ್ಕೆ ಆದ್ಯತೆ: ವಿದ್ಯಾರ್ಥಿಗಳ ಸಮವಸ್ತ್ರ, ಶೂ, ಪಠ್ಯ ಪುಸ್ತಕ ಮುಂದಿನ ಒಂದು ತಿಂಗಳಲ್ಲಿ ವಿತರಣೆಯಾಗಬೇಕು. ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ನೂತನ ಸಿಎಸ್ಆರ್ (CSR) ನೀತಿ ತರುತ್ತಿದ್ದೇವೆ.

• ಮಳೆ ಕೊರತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ: ಬಿತ್ತನೆ ಕಾರ್ಯ ಶುರುವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಲಭ್ಯತೆಗೆ ಕ್ರಮವಹಿಸಬೇಕು. ಎಲ್ ನಿನೋ ಪ್ರಭಾವ ಬೀರುವ ಸಾಧ್ಯತೆ ಇದ್ದು, ಅಲ್ಪಾವಧಿ ಮಳೆ ಮುನ್ಸೂಚನೆ ಇದೆ. 30% ಮಳೆ ಕೊರತೆ ಇದ್ದು, ಮೇವಿನ ಪೂರೈಕೆಗೆ ಕ್ರಮ ಕೈಗೊಳ್ಳಬೇಕು.

• ಗ್ಯಾರಂಟಿ ಪರಿಷ್ಕರಣೆ: ನಾವು ಯೋಜನೆಯನ್ನು ನಿಲ್ಲಿಸುವುದಿಲ್ಲ, ಯಾರನ್ನೂ ತೆಗೆದುಹಾಕುವ ಉದ್ದೇಶವಿಲ್ಲ. ಸರಿಯಾದ ಮಾಹಿತಿ ಇರುವ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಗೆ ಪುನಃ ಅರ್ಜಿ ಪಡೆಯಲಾಗುವುದು.

• ಮತದಾನದ ಹಕ್ಕು ರಕ್ಷಣೆ: ಮತದಾನದ ಹಕ್ಕಿಲ್ಲವಾದರೆ ಸರ್ಕಾರದ ಐದು ಗ್ಯಾರಂಟಿಗಳು, ಪಿಂಚಣಿ ಸಿಗುವುದಿಲ್ಲ. ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಬಿಎಲ್ಒಗಳು ನೀಡುವ ಎನ್ಯುಮರೇಷನ್ ಅರ್ಜಿಯನ್ನು ಸಲ್ಲಿಸಿ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು. ವಾಸ ಪ್ರಮಾಣ ಪತ್ರ ಇಲ್ಲದವರಿಗೆ ಅದನ್ನು ಶೀಘ್ರವೇ ನೀಡಲು ಸೂಚಿಸಲಾಗಿದೆ.

• ಉದ್ಯೋಗ ವಿನಿಮಯ ಮತ್ತು ಭಾರತ್ ಜೋಡೋ ಯುವಕರ ಸಂಘ: ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸಲು ಖಾಸಗಿ ಉದ್ಯೋಗ ವಿನಿಮಯದ ಮೂಲಕ ಯುವ ಯುಗ ಆರಂಭಿಸುತ್ತಿದ್ದೇವೆ. ಯುವಕರ ಪ್ರತಿಭೆಗಳ ಅನಾವರಣಕ್ಕೆ ರಾಜಕೀಯೇತರ ‘ಭಾರತ್ ಜೋಡೋ ಯುವಕರ ಸಂಘ’ ರಚಿಸಿ, ವಾರ್ಷಿಕ ₹10 ಲಕ್ಷ ಅನುದಾನ ನೀಡಲಾಗುವುದು. ಇದು ನನ್ನ ಕನಸಿನ ಯೋಜನೆಯಾಗಿದೆ.

• ವರ್ತುಲ ರಸ್ತೆ ಯೋಜನೆ: ಸುಗಮ‌ ಸಂಚಾರಕ್ಕಾಗಿ ಎಲ್ಲಾ ತಾಲ್ಲೂಕುಗಳಲ್ಲಿ ವರ್ತುಲ ರಸ್ತೆ ನಿರ್ಮಿಸಲು, ಗ್ರಿಡ್ ರೂಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

11 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

14 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

19 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

20 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

20 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

22 hours ago