0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೀಡಿದ ಪ್ರಮುಖ ನಿರ್ದೇಶನಗಳನ್ನು ಮಾಧ್ಯಮಗೋಷ್ಠಿಯಲ್ಲಿ ಹಂಚಿಕೊಂಡರು:

ಪ್ರಮುಖ ನಿರ್ದೇಶನಗಳ ವಿವರ

• ಟೀಮ್ ಕರ್ನಾಟಕ: ನಾವೆಲ್ಲರೂ ಒಂದೇ ತಂಡ, ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ. ಸಮಸ್ಯೆಯೊಂದಿಗೆ ಬಂದ ಜನರಿಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಅಧಿಕಾರಿಗಳ ವರ್ಗದಲ್ಲಿ ನಾವು ಸಾಮಾಜಿಕ ನ್ಯಾಯವನ್ನು ಪಾಲಿಸುತ್ತೇವೆ.

• 0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು. ನಾವು ಭ್ರಷ್ಟಾಚಾರ ಮುಕ್ತ ಕರ್ನಾಟಕ ನಿರ್ಮಿಸೋಣ. ಯಾರಾದರೂ ಕಾನೂನು ವಿರುದ್ಧ ಕೆಲಸ ಮಾಡಲು ಒತ್ತಡ ಹಾಕಲು ಬಂದರೆ ಕೂಡಲೇ ನನಗೆ ಮಾಹಿತಿ ನೀಡಬೇಕು.

• ರೌಡಿಸಂ & ಡ್ರಗ್ಸ್ ಮುಕ್ತ: ಗಾಂಜಾ, ಡ್ರಗ್ಸ್ ಹಾಗೂ ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಪ್ರತಿ ಪೊಲೀಸ್ ಠಾಣೆಯಲ್ಲಿ ಐದು ಪೊಲೀಸರ ತಂಡವನ್ನು ರಚಿಸಿ ರೌಡಿಸಂ ನಿಗ್ರಹಕ್ಕೆ ಸೂಚಿಸಿದ್ದೇನೆ. ನಕಲಿ ಫೈನಾನ್ಸ್‌ಗಳ ಹಾವಳಿಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು.

• ಶಿಕ್ಷಣಕ್ಕೆ ಆದ್ಯತೆ: ವಿದ್ಯಾರ್ಥಿಗಳ ಸಮವಸ್ತ್ರ, ಶೂ, ಪಠ್ಯ ಪುಸ್ತಕ ಮುಂದಿನ ಒಂದು ತಿಂಗಳಲ್ಲಿ ವಿತರಣೆಯಾಗಬೇಕು. ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ನೂತನ ಸಿಎಸ್ಆರ್ (CSR) ನೀತಿ ತರುತ್ತಿದ್ದೇವೆ.

• ಮಳೆ ಕೊರತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ: ಬಿತ್ತನೆ ಕಾರ್ಯ ಶುರುವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಲಭ್ಯತೆಗೆ ಕ್ರಮವಹಿಸಬೇಕು. ಎಲ್ ನಿನೋ ಪ್ರಭಾವ ಬೀರುವ ಸಾಧ್ಯತೆ ಇದ್ದು, ಅಲ್ಪಾವಧಿ ಮಳೆ ಮುನ್ಸೂಚನೆ ಇದೆ. 30% ಮಳೆ ಕೊರತೆ ಇದ್ದು, ಮೇವಿನ ಪೂರೈಕೆಗೆ ಕ್ರಮ ಕೈಗೊಳ್ಳಬೇಕು.

• ಗ್ಯಾರಂಟಿ ಪರಿಷ್ಕರಣೆ: ನಾವು ಯೋಜನೆಯನ್ನು ನಿಲ್ಲಿಸುವುದಿಲ್ಲ, ಯಾರನ್ನೂ ತೆಗೆದುಹಾಕುವ ಉದ್ದೇಶವಿಲ್ಲ. ಸರಿಯಾದ ಮಾಹಿತಿ ಇರುವ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಗೆ ಪುನಃ ಅರ್ಜಿ ಪಡೆಯಲಾಗುವುದು.

• ಮತದಾನದ ಹಕ್ಕು ರಕ್ಷಣೆ: ಮತದಾನದ ಹಕ್ಕಿಲ್ಲವಾದರೆ ಸರ್ಕಾರದ ಐದು ಗ್ಯಾರಂಟಿಗಳು, ಪಿಂಚಣಿ ಸಿಗುವುದಿಲ್ಲ. ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಬಿಎಲ್ಒಗಳು ನೀಡುವ ಎನ್ಯುಮರೇಷನ್ ಅರ್ಜಿಯನ್ನು ಸಲ್ಲಿಸಿ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು. ವಾಸ ಪ್ರಮಾಣ ಪತ್ರ ಇಲ್ಲದವರಿಗೆ ಅದನ್ನು ಶೀಘ್ರವೇ ನೀಡಲು ಸೂಚಿಸಲಾಗಿದೆ.

• ಉದ್ಯೋಗ ವಿನಿಮಯ ಮತ್ತು ಭಾರತ್ ಜೋಡೋ ಯುವಕರ ಸಂಘ: ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸಲು ಖಾಸಗಿ ಉದ್ಯೋಗ ವಿನಿಮಯದ ಮೂಲಕ ಯುವ ಯುಗ ಆರಂಭಿಸುತ್ತಿದ್ದೇವೆ. ಯುವಕರ ಪ್ರತಿಭೆಗಳ ಅನಾವರಣಕ್ಕೆ ರಾಜಕೀಯೇತರ ‘ಭಾರತ್ ಜೋಡೋ ಯುವಕರ ಸಂಘ’ ರಚಿಸಿ, ವಾರ್ಷಿಕ ₹10 ಲಕ್ಷ ಅನುದಾನ ನೀಡಲಾಗುವುದು. ಇದು ನನ್ನ ಕನಸಿನ ಯೋಜನೆಯಾಗಿದೆ.

• ವರ್ತುಲ ರಸ್ತೆ ಯೋಜನೆ: ಸುಗಮ‌ ಸಂಚಾರಕ್ಕಾಗಿ ಎಲ್ಲಾ ತಾಲ್ಲೂಕುಗಳಲ್ಲಿ ವರ್ತುಲ ರಸ್ತೆ ನಿರ್ಮಿಸಲು, ಗ್ರಿಡ್ ರೂಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

Ramesh Babu

Journalist

Recent Posts

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

5 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

7 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

20 hours ago

ಬೆಂ. ಗ್ರಾ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ- ಡಿಸಿ ಡಾ.ಕೆ ಎನ್ ಅನುರಾಧ

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…

22 hours ago

ವಸತಿ ಶಾಲೆಯಲ್ಲಿ ಅನುಮಾನಾಸ್ಪದ ವಿದ್ಯಾರ್ಥಿ ಸಾವು: ಶಿಕ್ಷಕರ ವಿರುದ್ಧ ಪೋಷಕರ ಆರೋಪ

ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…

23 hours ago

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

1 day ago