Categories: ಹವಾಮಾನ

03.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಾಗ ಬಿಸಿಲು, ಮೋಡದ ಜೊತೆಗೆ ಅಲ್ಲಲ್ಲಿ ದಿನದಲ್ಲಿ 2 ಅಥವಾ 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈ ವಾತಾವರಣವು ಜೂನ್ 4ರ ತನಕ ಮುಂದುವರಿಯುವ ಮುನ್ಸೂಚೆನೆ ಇದ್ದು, 5 ರಿಂದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ.
ಈಗಿನಂತೆ ಜೂನ್ 10ರಿಂದ ಮತ್ತೆ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಮಳೆ ಆರಂಭವಾಗಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ದಿನದಲ್ಲಿ ಒಂದೆರಡು ಮಳೆಯ ಮುನ್ಸೂಚೆನೆ ಇದೆ.
ಜೂನ್ 4ರ ತನಕ ಈ ವಾತಾವರಣ ಮುಂದುವರಿಯಬಹುದು. ನಂತರ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು, ಜೂನ್ 10ರಿಂದ ಸಾಮಾನ್ಯ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಕಲಬುರ್ಗಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಜೂನ್ 4ರಂದು ಒಂದೆರಡು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ನಂತರ ಬಿಸಿಲಿನ ವಾತಾವರಣ ಮುಂದುವರಿಯಲಿದೆ.

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ ಚುರುಕಾಗಬಹುದು.
ಇದರ ಹೊರತು ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಮುಂದುವರಿಯಲಿದೆ.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

1 hour ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

13 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

14 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

15 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

15 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

23 hours ago