1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆಗೆ ಆಗ್ರಹ

ರಾಜ್ಯ ಸರ್ಕಾರವು ಒಂದನೇ ತರಗತಿಯ ದಾಖಲಾತಿಗೆ ಕನಿಷ್ಠ ವಯೋಮಿತಿ 6 ವರ್ಷ ಪೂರೈಸಿರಬೇಕು ಆದೇಶವನ್ನು ಪ್ರಸಕ್ತ ಸಾಲಿನಿಂದ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಶಿಕ್ಷಣ ಇಲಾಖೆ ಮುಂದಾಗಿರುವ ಕ್ರಮ ಅವೈಜ್ಞಾನಿಕವಾಗಿದ್ದು, ಕೂಡಲೇ ಈ ಆದೇಶವನ್ನು ಸರ್ಕಾರ ಹಿಂಪಡೆದು ವಯೋಮಿತಿ ಸಡಿಲಿಕೆ ಮಾಡಬೇಕೆಂದು ಒತ್ತಾಯಿಸಿ, ಕನ್ನಡ ಪಕ್ಷದ ವತಿಯಿಂದ ಕ್ಷೇತ್ರ ಶಿಕ್ಷಣಾಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಕನ್ನಡ ಪಕ್ಷದ ಕೇಂದ್ರ ಸಮಿತಿಯ ಉಪಾಧ್ಯಕ್ಷ ಸಂಜೀವ್ ನಾಯಕ್, ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ನಿಯಮದ ಪ್ರಕಾರ, 2025ರ ಜೂನ್ 1ಕ್ಕೆ 6 ವರ್ಷ ತುಂಬಿರುವ ಮಕ್ಕಳಿಗೆ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡುವುದಾಗಿ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು ಹೇಳುತ್ತಿವೆ. ಈ ಹಿಂದೆ 5 ವರ್ಷ 10 ತಿಂಗಳು ತುಂಬಿದ್ದರೆ ದಾಖಲಾತಿ ಮಾಡಿಕೊಳ್ಳಲಾಗುತ್ತಿತ್ತು. ಇದರಿಂದ ರಾಜ್ಯದಲ್ಲಿ 6 ವರ್ಷ ತುಂಬದ ಯುಕೆಜಿ ಮಕ್ಕಳು ಮತ್ತೆ ಒಂದು ವರ್ಷ ಯುಕೆಜಿ ಪುನರಾವರ್ತಿಸಬೇಕಾಗದ ಪರಿಸ್ಥತಿ ಎದುರಾಗಿದ್ದು ಪೋಷಕರಿಗೆ ಆರ್ಥಿಕ ಹೊರೆಯಾಗಲಿದ್ದು, ಮಕ್ಕಳ ಮನೋಸ್ಥಿತಿ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದರು.

ಈ ನಿಯಮದಿಂದ ರಾಜ್ಯದಲ್ಲಿ ಇಂಥ ಸುಮಾರು ಐದು ಲಕ್ಷ ಮಕ್ಕಳು ಇದ್ದು ಅವರ ಶೈಕ್ಷಣಿಕ ಜೀವನ ಸಂದಿಗ್ಧಕ್ಕೆ ಸಿಲುಕಿದೆ ಎಂದು ಪೋಷಕರು ಅಳಲು ತೋಡಿಕೊಳ್ಳುತ್ತಿದ್ದಾರೆ. ಇದಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿವೇಚನಾ ರಹಿತ ನಿರ್ಧಾರ ಕಾರಣವಾಗಿದ್ದು, ಇಂತಹ ಅಸಮರ್ಥರು ಶಿಕ್ಷಣ ಸಚಿವರಾಗಿರುವುದು ರಾಜ್ಯದ ದುರಂತವಾಗಿದೆ. ಬಹುತೇಕ ಶಾಲೆಗಳು ಮಕ್ಕಳನ್ನು ಎಲ್‍ಕೆಜಿಗೆ ಸೇರಿಸಿಕೊಳ್ಳುವಾಗ ಈ ಬಗ್ಗೆ ಮಾಹಿತಿ ನೀಡಿರಲಿಲ್ಲ. ಈಗ ದಿಢೀರ್ ನಿಯಮ ಮುಂದಿಡುತ್ತಿವೆ ಎನ್ನುವುದು ಪೋಷಕರ ಆರೋಪ ಇಂಥ ಮಕ್ಕಳ ಪಟ್ಟಿಯಲ್ಲಿ ಒಂದೆರಡು ದಿನದ ವ್ಯತ್ಯಾಸ ಇರುವವರು, ವಾರಗಳ, ತಿಂಗಳ ವ್ಯತ್ಯಾಸ ಇರುವವರೂ ಇಲ್ಲದಿದ್ದರೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಕೂಡಲೇ ಹಿಂದಿನ ವರ್ಷದಂತೆ ಮಕ್ಕಳನ್ನು ಶಾಲೆಗೆ ದಾಖಲಾತಿ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಆಗ್ರಹಿಸಿದರು.

ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್ ಮಾತನಾಡಿ, ಸರ್ಕಾರಗಳಿಗೆ ಶಿಕ್ಷಣ ನೀತಿಗಳನ್ನು ರೂಪಿಸುವಲ್ಲಿ ಇರುವ ಕಾಳಜಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಇಲ್ಲ, ಮುಂಚೆ ಶಿಕ್ಷಣಾಕಾರಿಗಳು ಶಾಲಾ ಶಿಕ್ಷಕರ ಕಾರ್ಯ ಕ್ಷಮತೆ, ಶಿಕ್ಷಣದ ಗುಣಮಟ್ಟಗಳನ್ನು ಪರೀಕ್ಷಿಸುತ್ತಿದ್ದರು. ಆದರೆ ಈಗ ಶಿಕ್ಷಕರಿಗೇ ಓದುವ ಹವ್ಯಾಸವಿಲ್ಲದೇ ಗುಣಮಟ್ಟ ಕುಸಿಯುತ್ತಿದೆ ಎಂದರು.

ಪ್ರತಿಭಟನೆಯಲ್ಲಿ ಕನ್ನಡ ಪಕ್ಷದ ಜಿಲ್ಲಾ ಘಟಕದ ಅದ್ಯಕ್ಷ ಮುನಿಪಾಪಯ್ಯ, ತಾಲೂಕು ಅಧ್ಯಕ್ಷ ಡಿ.ವೆಂಕಟೇಶ್, ಛಲವಾದಿ ಮಹಾ ಸಭಾದ ತಾಲೂಕು ಅಧ್ಯಕ್ಷ ಗುರುರಾಜಪ್ಪ,
ತಾಲೂಕು ಶಿವರಾಜ್‍ಕುಮಾರ್ ಕನ್ನಡ ಸೇನಾ ಸಮಿತಿ ಅಧ್ಯಕ್ಷ ಜೆ.ಆರ್.ರಮೇಶ್, ಉಪಾಧ್ಯಕ್ಷ ಜಿ.ರಾಮು, ಕನ್ನಡ ಪಕ್ಷದ ವಿ.ಪರಮೇಶ್, ಆರ್.ರಂಗನಾಥ್, ಬೋರೇಗೌಡ, ಕೆ.ಎನ್.ಕುಮಾರ್, ಕೇಬಲ್ ಮುನಿರಾಜು, ಕಾವೇರಿ ಕನ್ನಡ ಸಂಘದ ಮೋಹನ್ ಕುಮಾರ್, ಕನ್ನಡ ಜಾಗೃತ ಪರಿಷತ್ತಿನ ಸೂರ್ಯನಾರಾಯಣ್, ಆನಂದ್ ರಾಜ್, ಚಂದ್ರಣ್ಣ ಭಾಗವಹಿಸಿದ್ದರು.

Ramesh Babu

Journalist

Recent Posts

ಅನಾಥರು, ಅಶಕ್ತ ಹೆಣ್ಣು ಮಕ್ಕಳಿಗೆ ಯುವಿಕಾ ವರದಾನ

ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…

11 hours ago

ಮೇ.8ರಂದು ಜೆಡಿಎಸ್ ರಜತ ಮಹೋತ್ಸವ: ನಿಖಿಲ್ ಕುಮಾರಸ್ವಾಮಿ ಭಾಗಿ- ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ

ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…

12 hours ago

ಹನ್ನೊಂದು ಮಂದಿ ಬಾಲ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…

12 hours ago

ತಾಲ್ಲೂಕಿನಲ್ಲಿ ಜೆಡಿಎಸ್ ತನ್ನ ಶಕ್ತಿ ಕಳೆದುಕೊಳ್ಳಲು ಪಕ್ಷ ವಿರೋಧಿ ಚಟುವಟಿಕೆಗಳೇ ಕಾರಣ- ಜೆಡಿಎಸ್ ಮುಖಂಡ ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…

13 hours ago

ಖಾಸಗಿ ಟೆಂಡರ್ ದಾರರ ಬೇಜವಾಬ್ದಾರಿ: ಕುಡಿಯಲು ನೀರಿಲ್ಲದೇ ಜನ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…

13 hours ago

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

22 hours ago