1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಭೂಮಿ ಒತ್ತುವರಿ ತೆರವು: ಸುಮಾರು 70 ಲಕ್ಷ ಮೌಲ್ಯದ ಜಾಗ ಸರ್ಕಾರ ವಶ

ದೊಡ್ಡಬಳ್ಳಾಪುರ ತಾಲೂಕಿನ‌ ಕಾರನಾಳ ಗ್ರಾಮದ ಸರ್ವೇ ನಂಬರ್ 49ರಲ್ಲಿ 1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಜಾಗವನ್ನ ಸುತ್ತಮುತ್ತಲಿನ 5 ಮಂದಿ ಒತ್ತುವರಿ ಮಾಡಿದ್ದರು. ಈ ಒತ್ತುವರಿ ಭೂಮಿಯನ್ನು ಲೋಕಾಯುಕ್ತರ ಆದೇಶದ ಮೇರೆಗೆ ಕಾರ್ಯಾಚರಣೆ ನಡೆಸಿದ ಕಂದಾಯ ಇಲಾಖೆಯ ಅಧಿಕಾರಿಗಳು ಜೆಸಿಬಿ ಮೂಲಕ ತೆರವು ಕಾರ್ಯಾ ನಡೆಸಿದ್ದಾರೆ. ಈ ಮೂಲಕ ಸುಮಾರು 70 ಲಕ್ಷ ಮೌಲ್ಯದ ಜಾಗವನ್ನ ಸರ್ಕಾರದ ವಶಕ್ಕೆ ಪಡೆದಿದ್ದಾರೆ.

ಕಾರನಾಳ ಗ್ರಾಮದ ಸರ್ವೆ ನಂಬರ್ 49ರಲ್ಲಿ 1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಜಾಗವನ್ನ ಸುತ್ತಮುತ್ತಲಿನ 5 ಮಂದಿ ಒತ್ತುವರಿ ಮಾಡಿದ್ದರು, ನಂಜಪ್ಪ, ಸಂಜೀವರಾಯಪ್ಪ, ನಾರಾಯಣಪ್ಪ , ರವಿ.ಕವಿತಾ ಒತ್ತುವರಿ ಮಾಡಿದ್ದರು. ಒತ್ತುವರಿ ಮಾಡಿದ ಜಾಗದಲ್ಲಿ ಮನೆ ಮತ್ತು ತೆಂಗಿನ ಮರಗಳನ್ನ ಹಾಕಿಕೊಂಡಿದ್ದರು. ಒತ್ತುವರಿ ತೆರವು ಮಾಡುವಂತೆ ವೆಂಕಟೇಶಪ್ಪ ಎಂಬುವವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಲೋಕಾಯುಕ್ತರ ಆದೇಶದ ಮೇರೆಗೆ ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಒತ್ತುವರಿ ಭೂಮಿಯನ್ನು ತೆರವುಗೊಳಿಸಿದ್ದಾರೆ.

ಉಪ ತಹಶೀಲ್ದಾರ್ ವೆಂಕಟೇಶ್ ಮೂರ್ತಿ, ತೂಬಗೆರೆ ಹೋಬಳಿ ರಾಜಸ್ವ ಅಧಿಕಾರಿ ನರಸಿಂಹ ಮತ್ತು ಭೂಮಾಪನ ಇಲಾಖೆಯ ಸಿಬ್ಬಂದಿ ಒತ್ತುವರಿ ತೆರವು ಕಾರ್ಯದಲ್ಲಿ ಭಾಗಿಯಾಗಿದ್ದರು.

ಒತ್ತುವರಿ ಜಾಗದಲ್ಲಿ ಕಟ್ಟಲಾಗಿದ್ದ ಮನೆಯನ್ನ ಜೆಸಿಬಿ ಮೂಲಕ ಕೆಡವಲಾಗಿದ್ದು, ಒತ್ತುವರಿ ಜಾಗವನ್ನ ಗುರುತಿಸಿ ಟ್ರಂಚ್ ತೊಡಿ ಗಡಿಯನ್ನ ಗುರುತಿಸಲಾಗಿದೆ.

ಒತ್ತುವರಿದಾರರು ಸಹ ಕಾರ್ಯಾಚರಣೆಗೆ ಸಹಕರಿಸಿದ್ದಾರೆ, ನಿರ್ಮಿತಿ ಕೇಂದ್ರದಿಂದ ಕಾಂಪೌಂಡ್ ನಿರ್ಮಾಣ ಮಾಡಿ, ಮುಂದಿನ ದಿನಗಳಲ್ಲಿ ಒತ್ತುವರಿಯಾಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪ ತಹಶೀಲ್ದಾರ್ ವೆಂಕಟೇಶ್ ಮೂರ್ತಿ ತಿಳಿಸಿದರು.

Ramesh Babu

Journalist

Share
Published by
Ramesh Babu

Recent Posts

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

13 minutes ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

38 minutes ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

14 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

15 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

18 hours ago