1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಭೂಮಿ ಒತ್ತುವರಿ ತೆರವು: ಸುಮಾರು 70 ಲಕ್ಷ ಮೌಲ್ಯದ ಜಾಗ ಸರ್ಕಾರ ವಶ

ದೊಡ್ಡಬಳ್ಳಾಪುರ ತಾಲೂಕಿನ‌ ಕಾರನಾಳ ಗ್ರಾಮದ ಸರ್ವೇ ನಂಬರ್ 49ರಲ್ಲಿ 1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಜಾಗವನ್ನ ಸುತ್ತಮುತ್ತಲಿನ 5 ಮಂದಿ ಒತ್ತುವರಿ ಮಾಡಿದ್ದರು. ಈ ಒತ್ತುವರಿ ಭೂಮಿಯನ್ನು ಲೋಕಾಯುಕ್ತರ ಆದೇಶದ ಮೇರೆಗೆ ಕಾರ್ಯಾಚರಣೆ ನಡೆಸಿದ ಕಂದಾಯ ಇಲಾಖೆಯ ಅಧಿಕಾರಿಗಳು ಜೆಸಿಬಿ ಮೂಲಕ ತೆರವು ಕಾರ್ಯಾ ನಡೆಸಿದ್ದಾರೆ. ಈ ಮೂಲಕ ಸುಮಾರು 70 ಲಕ್ಷ ಮೌಲ್ಯದ ಜಾಗವನ್ನ ಸರ್ಕಾರದ ವಶಕ್ಕೆ ಪಡೆದಿದ್ದಾರೆ.

ಕಾರನಾಳ ಗ್ರಾಮದ ಸರ್ವೆ ನಂಬರ್ 49ರಲ್ಲಿ 1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಜಾಗವನ್ನ ಸುತ್ತಮುತ್ತಲಿನ 5 ಮಂದಿ ಒತ್ತುವರಿ ಮಾಡಿದ್ದರು, ನಂಜಪ್ಪ, ಸಂಜೀವರಾಯಪ್ಪ, ನಾರಾಯಣಪ್ಪ , ರವಿ.ಕವಿತಾ ಒತ್ತುವರಿ ಮಾಡಿದ್ದರು. ಒತ್ತುವರಿ ಮಾಡಿದ ಜಾಗದಲ್ಲಿ ಮನೆ ಮತ್ತು ತೆಂಗಿನ ಮರಗಳನ್ನ ಹಾಕಿಕೊಂಡಿದ್ದರು. ಒತ್ತುವರಿ ತೆರವು ಮಾಡುವಂತೆ ವೆಂಕಟೇಶಪ್ಪ ಎಂಬುವವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಲೋಕಾಯುಕ್ತರ ಆದೇಶದ ಮೇರೆಗೆ ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಒತ್ತುವರಿ ಭೂಮಿಯನ್ನು ತೆರವುಗೊಳಿಸಿದ್ದಾರೆ.

ಉಪ ತಹಶೀಲ್ದಾರ್ ವೆಂಕಟೇಶ್ ಮೂರ್ತಿ, ತೂಬಗೆರೆ ಹೋಬಳಿ ರಾಜಸ್ವ ಅಧಿಕಾರಿ ನರಸಿಂಹ ಮತ್ತು ಭೂಮಾಪನ ಇಲಾಖೆಯ ಸಿಬ್ಬಂದಿ ಒತ್ತುವರಿ ತೆರವು ಕಾರ್ಯದಲ್ಲಿ ಭಾಗಿಯಾಗಿದ್ದರು.

ಒತ್ತುವರಿ ಜಾಗದಲ್ಲಿ ಕಟ್ಟಲಾಗಿದ್ದ ಮನೆಯನ್ನ ಜೆಸಿಬಿ ಮೂಲಕ ಕೆಡವಲಾಗಿದ್ದು, ಒತ್ತುವರಿ ಜಾಗವನ್ನ ಗುರುತಿಸಿ ಟ್ರಂಚ್ ತೊಡಿ ಗಡಿಯನ್ನ ಗುರುತಿಸಲಾಗಿದೆ.

ಒತ್ತುವರಿದಾರರು ಸಹ ಕಾರ್ಯಾಚರಣೆಗೆ ಸಹಕರಿಸಿದ್ದಾರೆ, ನಿರ್ಮಿತಿ ಕೇಂದ್ರದಿಂದ ಕಾಂಪೌಂಡ್ ನಿರ್ಮಾಣ ಮಾಡಿ, ಮುಂದಿನ ದಿನಗಳಲ್ಲಿ ಒತ್ತುವರಿಯಾಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪ ತಹಶೀಲ್ದಾರ್ ವೆಂಕಟೇಶ್ ಮೂರ್ತಿ ತಿಳಿಸಿದರು.

Ramesh Babu

Journalist

Recent Posts

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

6 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

16 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

17 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

22 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

23 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

1 day ago