1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಭೂಮಿ ಒತ್ತುವರಿ ತೆರವು: ಸುಮಾರು 70 ಲಕ್ಷ ಮೌಲ್ಯದ ಜಾಗ ಸರ್ಕಾರ ವಶ

ದೊಡ್ಡಬಳ್ಳಾಪುರ ತಾಲೂಕಿನ‌ ಕಾರನಾಳ ಗ್ರಾಮದ ಸರ್ವೇ ನಂಬರ್ 49ರಲ್ಲಿ 1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಜಾಗವನ್ನ ಸುತ್ತಮುತ್ತಲಿನ 5 ಮಂದಿ ಒತ್ತುವರಿ ಮಾಡಿದ್ದರು. ಈ ಒತ್ತುವರಿ ಭೂಮಿಯನ್ನು ಲೋಕಾಯುಕ್ತರ ಆದೇಶದ ಮೇರೆಗೆ ಕಾರ್ಯಾಚರಣೆ ನಡೆಸಿದ ಕಂದಾಯ ಇಲಾಖೆಯ ಅಧಿಕಾರಿಗಳು ಜೆಸಿಬಿ ಮೂಲಕ ತೆರವು ಕಾರ್ಯಾ ನಡೆಸಿದ್ದಾರೆ. ಈ ಮೂಲಕ ಸುಮಾರು 70 ಲಕ್ಷ ಮೌಲ್ಯದ ಜಾಗವನ್ನ ಸರ್ಕಾರದ ವಶಕ್ಕೆ ಪಡೆದಿದ್ದಾರೆ.

ಕಾರನಾಳ ಗ್ರಾಮದ ಸರ್ವೆ ನಂಬರ್ 49ರಲ್ಲಿ 1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಜಾಗವನ್ನ ಸುತ್ತಮುತ್ತಲಿನ 5 ಮಂದಿ ಒತ್ತುವರಿ ಮಾಡಿದ್ದರು, ನಂಜಪ್ಪ, ಸಂಜೀವರಾಯಪ್ಪ, ನಾರಾಯಣಪ್ಪ , ರವಿ.ಕವಿತಾ ಒತ್ತುವರಿ ಮಾಡಿದ್ದರು. ಒತ್ತುವರಿ ಮಾಡಿದ ಜಾಗದಲ್ಲಿ ಮನೆ ಮತ್ತು ತೆಂಗಿನ ಮರಗಳನ್ನ ಹಾಕಿಕೊಂಡಿದ್ದರು. ಒತ್ತುವರಿ ತೆರವು ಮಾಡುವಂತೆ ವೆಂಕಟೇಶಪ್ಪ ಎಂಬುವವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಲೋಕಾಯುಕ್ತರ ಆದೇಶದ ಮೇರೆಗೆ ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಒತ್ತುವರಿ ಭೂಮಿಯನ್ನು ತೆರವುಗೊಳಿಸಿದ್ದಾರೆ.

ಉಪ ತಹಶೀಲ್ದಾರ್ ವೆಂಕಟೇಶ್ ಮೂರ್ತಿ, ತೂಬಗೆರೆ ಹೋಬಳಿ ರಾಜಸ್ವ ಅಧಿಕಾರಿ ನರಸಿಂಹ ಮತ್ತು ಭೂಮಾಪನ ಇಲಾಖೆಯ ಸಿಬ್ಬಂದಿ ಒತ್ತುವರಿ ತೆರವು ಕಾರ್ಯದಲ್ಲಿ ಭಾಗಿಯಾಗಿದ್ದರು.

ಒತ್ತುವರಿ ಜಾಗದಲ್ಲಿ ಕಟ್ಟಲಾಗಿದ್ದ ಮನೆಯನ್ನ ಜೆಸಿಬಿ ಮೂಲಕ ಕೆಡವಲಾಗಿದ್ದು, ಒತ್ತುವರಿ ಜಾಗವನ್ನ ಗುರುತಿಸಿ ಟ್ರಂಚ್ ತೊಡಿ ಗಡಿಯನ್ನ ಗುರುತಿಸಲಾಗಿದೆ.

ಒತ್ತುವರಿದಾರರು ಸಹ ಕಾರ್ಯಾಚರಣೆಗೆ ಸಹಕರಿಸಿದ್ದಾರೆ, ನಿರ್ಮಿತಿ ಕೇಂದ್ರದಿಂದ ಕಾಂಪೌಂಡ್ ನಿರ್ಮಾಣ ಮಾಡಿ, ಮುಂದಿನ ದಿನಗಳಲ್ಲಿ ಒತ್ತುವರಿಯಾಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪ ತಹಶೀಲ್ದಾರ್ ವೆಂಕಟೇಶ್ ಮೂರ್ತಿ ತಿಳಿಸಿದರು.

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

4 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

4 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

12 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

1 day ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago