1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಭೂಮಿ ಒತ್ತುವರಿ ತೆರವು: ಸುಮಾರು 70 ಲಕ್ಷ ಮೌಲ್ಯದ ಜಾಗ ಸರ್ಕಾರ ವಶ

ದೊಡ್ಡಬಳ್ಳಾಪುರ ತಾಲೂಕಿನ‌ ಕಾರನಾಳ ಗ್ರಾಮದ ಸರ್ವೇ ನಂಬರ್ 49ರಲ್ಲಿ 1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಜಾಗವನ್ನ ಸುತ್ತಮುತ್ತಲಿನ 5 ಮಂದಿ ಒತ್ತುವರಿ ಮಾಡಿದ್ದರು. ಈ ಒತ್ತುವರಿ ಭೂಮಿಯನ್ನು ಲೋಕಾಯುಕ್ತರ ಆದೇಶದ ಮೇರೆಗೆ ಕಾರ್ಯಾಚರಣೆ ನಡೆಸಿದ ಕಂದಾಯ ಇಲಾಖೆಯ ಅಧಿಕಾರಿಗಳು ಜೆಸಿಬಿ ಮೂಲಕ ತೆರವು ಕಾರ್ಯಾ ನಡೆಸಿದ್ದಾರೆ. ಈ ಮೂಲಕ ಸುಮಾರು 70 ಲಕ್ಷ ಮೌಲ್ಯದ ಜಾಗವನ್ನ ಸರ್ಕಾರದ ವಶಕ್ಕೆ ಪಡೆದಿದ್ದಾರೆ.

ಕಾರನಾಳ ಗ್ರಾಮದ ಸರ್ವೆ ನಂಬರ್ 49ರಲ್ಲಿ 1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಜಾಗವನ್ನ ಸುತ್ತಮುತ್ತಲಿನ 5 ಮಂದಿ ಒತ್ತುವರಿ ಮಾಡಿದ್ದರು, ನಂಜಪ್ಪ, ಸಂಜೀವರಾಯಪ್ಪ, ನಾರಾಯಣಪ್ಪ , ರವಿ.ಕವಿತಾ ಒತ್ತುವರಿ ಮಾಡಿದ್ದರು. ಒತ್ತುವರಿ ಮಾಡಿದ ಜಾಗದಲ್ಲಿ ಮನೆ ಮತ್ತು ತೆಂಗಿನ ಮರಗಳನ್ನ ಹಾಕಿಕೊಂಡಿದ್ದರು. ಒತ್ತುವರಿ ತೆರವು ಮಾಡುವಂತೆ ವೆಂಕಟೇಶಪ್ಪ ಎಂಬುವವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಲೋಕಾಯುಕ್ತರ ಆದೇಶದ ಮೇರೆಗೆ ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಒತ್ತುವರಿ ಭೂಮಿಯನ್ನು ತೆರವುಗೊಳಿಸಿದ್ದಾರೆ.

ಉಪ ತಹಶೀಲ್ದಾರ್ ವೆಂಕಟೇಶ್ ಮೂರ್ತಿ, ತೂಬಗೆರೆ ಹೋಬಳಿ ರಾಜಸ್ವ ಅಧಿಕಾರಿ ನರಸಿಂಹ ಮತ್ತು ಭೂಮಾಪನ ಇಲಾಖೆಯ ಸಿಬ್ಬಂದಿ ಒತ್ತುವರಿ ತೆರವು ಕಾರ್ಯದಲ್ಲಿ ಭಾಗಿಯಾಗಿದ್ದರು.

ಒತ್ತುವರಿ ಜಾಗದಲ್ಲಿ ಕಟ್ಟಲಾಗಿದ್ದ ಮನೆಯನ್ನ ಜೆಸಿಬಿ ಮೂಲಕ ಕೆಡವಲಾಗಿದ್ದು, ಒತ್ತುವರಿ ಜಾಗವನ್ನ ಗುರುತಿಸಿ ಟ್ರಂಚ್ ತೊಡಿ ಗಡಿಯನ್ನ ಗುರುತಿಸಲಾಗಿದೆ.

ಒತ್ತುವರಿದಾರರು ಸಹ ಕಾರ್ಯಾಚರಣೆಗೆ ಸಹಕರಿಸಿದ್ದಾರೆ, ನಿರ್ಮಿತಿ ಕೇಂದ್ರದಿಂದ ಕಾಂಪೌಂಡ್ ನಿರ್ಮಾಣ ಮಾಡಿ, ಮುಂದಿನ ದಿನಗಳಲ್ಲಿ ಒತ್ತುವರಿಯಾಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪ ತಹಶೀಲ್ದಾರ್ ವೆಂಕಟೇಶ್ ಮೂರ್ತಿ ತಿಳಿಸಿದರು.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

1 hour ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

2 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

6 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

10 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

12 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

12 hours ago