1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಭೂಮಿ ಒತ್ತುವರಿ ತೆರವು: ಸುಮಾರು 70 ಲಕ್ಷ ಮೌಲ್ಯದ ಜಾಗ ಸರ್ಕಾರ ವಶ

ದೊಡ್ಡಬಳ್ಳಾಪುರ ತಾಲೂಕಿನ‌ ಕಾರನಾಳ ಗ್ರಾಮದ ಸರ್ವೇ ನಂಬರ್ 49ರಲ್ಲಿ 1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಜಾಗವನ್ನ ಸುತ್ತಮುತ್ತಲಿನ 5 ಮಂದಿ ಒತ್ತುವರಿ ಮಾಡಿದ್ದರು. ಈ ಒತ್ತುವರಿ ಭೂಮಿಯನ್ನು ಲೋಕಾಯುಕ್ತರ ಆದೇಶದ ಮೇರೆಗೆ ಕಾರ್ಯಾಚರಣೆ ನಡೆಸಿದ ಕಂದಾಯ ಇಲಾಖೆಯ ಅಧಿಕಾರಿಗಳು ಜೆಸಿಬಿ ಮೂಲಕ ತೆರವು ಕಾರ್ಯಾ ನಡೆಸಿದ್ದಾರೆ. ಈ ಮೂಲಕ ಸುಮಾರು 70 ಲಕ್ಷ ಮೌಲ್ಯದ ಜಾಗವನ್ನ ಸರ್ಕಾರದ ವಶಕ್ಕೆ ಪಡೆದಿದ್ದಾರೆ.

ಕಾರನಾಳ ಗ್ರಾಮದ ಸರ್ವೆ ನಂಬರ್ 49ರಲ್ಲಿ 1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಜಾಗವನ್ನ ಸುತ್ತಮುತ್ತಲಿನ 5 ಮಂದಿ ಒತ್ತುವರಿ ಮಾಡಿದ್ದರು, ನಂಜಪ್ಪ, ಸಂಜೀವರಾಯಪ್ಪ, ನಾರಾಯಣಪ್ಪ , ರವಿ.ಕವಿತಾ ಒತ್ತುವರಿ ಮಾಡಿದ್ದರು. ಒತ್ತುವರಿ ಮಾಡಿದ ಜಾಗದಲ್ಲಿ ಮನೆ ಮತ್ತು ತೆಂಗಿನ ಮರಗಳನ್ನ ಹಾಕಿಕೊಂಡಿದ್ದರು. ಒತ್ತುವರಿ ತೆರವು ಮಾಡುವಂತೆ ವೆಂಕಟೇಶಪ್ಪ ಎಂಬುವವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಲೋಕಾಯುಕ್ತರ ಆದೇಶದ ಮೇರೆಗೆ ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಒತ್ತುವರಿ ಭೂಮಿಯನ್ನು ತೆರವುಗೊಳಿಸಿದ್ದಾರೆ.

ಉಪ ತಹಶೀಲ್ದಾರ್ ವೆಂಕಟೇಶ್ ಮೂರ್ತಿ, ತೂಬಗೆರೆ ಹೋಬಳಿ ರಾಜಸ್ವ ಅಧಿಕಾರಿ ನರಸಿಂಹ ಮತ್ತು ಭೂಮಾಪನ ಇಲಾಖೆಯ ಸಿಬ್ಬಂದಿ ಒತ್ತುವರಿ ತೆರವು ಕಾರ್ಯದಲ್ಲಿ ಭಾಗಿಯಾಗಿದ್ದರು.

ಒತ್ತುವರಿ ಜಾಗದಲ್ಲಿ ಕಟ್ಟಲಾಗಿದ್ದ ಮನೆಯನ್ನ ಜೆಸಿಬಿ ಮೂಲಕ ಕೆಡವಲಾಗಿದ್ದು, ಒತ್ತುವರಿ ಜಾಗವನ್ನ ಗುರುತಿಸಿ ಟ್ರಂಚ್ ತೊಡಿ ಗಡಿಯನ್ನ ಗುರುತಿಸಲಾಗಿದೆ.

ಒತ್ತುವರಿದಾರರು ಸಹ ಕಾರ್ಯಾಚರಣೆಗೆ ಸಹಕರಿಸಿದ್ದಾರೆ, ನಿರ್ಮಿತಿ ಕೇಂದ್ರದಿಂದ ಕಾಂಪೌಂಡ್ ನಿರ್ಮಾಣ ಮಾಡಿ, ಮುಂದಿನ ದಿನಗಳಲ್ಲಿ ಒತ್ತುವರಿಯಾಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪ ತಹಶೀಲ್ದಾರ್ ವೆಂಕಟೇಶ್ ಮೂರ್ತಿ ತಿಳಿಸಿದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

7 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

8 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

9 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

10 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

17 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago