1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಭೂಮಿ ಒತ್ತುವರಿ ತೆರವು: ಸುಮಾರು 70 ಲಕ್ಷ ಮೌಲ್ಯದ ಜಾಗ ಸರ್ಕಾರ ವಶ

ದೊಡ್ಡಬಳ್ಳಾಪುರ ತಾಲೂಕಿನ‌ ಕಾರನಾಳ ಗ್ರಾಮದ ಸರ್ವೇ ನಂಬರ್ 49ರಲ್ಲಿ 1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಜಾಗವನ್ನ ಸುತ್ತಮುತ್ತಲಿನ 5 ಮಂದಿ ಒತ್ತುವರಿ ಮಾಡಿದ್ದರು. ಈ ಒತ್ತುವರಿ ಭೂಮಿಯನ್ನು ಲೋಕಾಯುಕ್ತರ ಆದೇಶದ ಮೇರೆಗೆ ಕಾರ್ಯಾಚರಣೆ ನಡೆಸಿದ ಕಂದಾಯ ಇಲಾಖೆಯ ಅಧಿಕಾರಿಗಳು ಜೆಸಿಬಿ ಮೂಲಕ ತೆರವು ಕಾರ್ಯಾ ನಡೆಸಿದ್ದಾರೆ. ಈ ಮೂಲಕ ಸುಮಾರು 70 ಲಕ್ಷ ಮೌಲ್ಯದ ಜಾಗವನ್ನ ಸರ್ಕಾರದ ವಶಕ್ಕೆ ಪಡೆದಿದ್ದಾರೆ.

ಕಾರನಾಳ ಗ್ರಾಮದ ಸರ್ವೆ ನಂಬರ್ 49ರಲ್ಲಿ 1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಜಾಗವನ್ನ ಸುತ್ತಮುತ್ತಲಿನ 5 ಮಂದಿ ಒತ್ತುವರಿ ಮಾಡಿದ್ದರು, ನಂಜಪ್ಪ, ಸಂಜೀವರಾಯಪ್ಪ, ನಾರಾಯಣಪ್ಪ , ರವಿ.ಕವಿತಾ ಒತ್ತುವರಿ ಮಾಡಿದ್ದರು. ಒತ್ತುವರಿ ಮಾಡಿದ ಜಾಗದಲ್ಲಿ ಮನೆ ಮತ್ತು ತೆಂಗಿನ ಮರಗಳನ್ನ ಹಾಕಿಕೊಂಡಿದ್ದರು. ಒತ್ತುವರಿ ತೆರವು ಮಾಡುವಂತೆ ವೆಂಕಟೇಶಪ್ಪ ಎಂಬುವವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಲೋಕಾಯುಕ್ತರ ಆದೇಶದ ಮೇರೆಗೆ ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಒತ್ತುವರಿ ಭೂಮಿಯನ್ನು ತೆರವುಗೊಳಿಸಿದ್ದಾರೆ.

ಉಪ ತಹಶೀಲ್ದಾರ್ ವೆಂಕಟೇಶ್ ಮೂರ್ತಿ, ತೂಬಗೆರೆ ಹೋಬಳಿ ರಾಜಸ್ವ ಅಧಿಕಾರಿ ನರಸಿಂಹ ಮತ್ತು ಭೂಮಾಪನ ಇಲಾಖೆಯ ಸಿಬ್ಬಂದಿ ಒತ್ತುವರಿ ತೆರವು ಕಾರ್ಯದಲ್ಲಿ ಭಾಗಿಯಾಗಿದ್ದರು.

ಒತ್ತುವರಿ ಜಾಗದಲ್ಲಿ ಕಟ್ಟಲಾಗಿದ್ದ ಮನೆಯನ್ನ ಜೆಸಿಬಿ ಮೂಲಕ ಕೆಡವಲಾಗಿದ್ದು, ಒತ್ತುವರಿ ಜಾಗವನ್ನ ಗುರುತಿಸಿ ಟ್ರಂಚ್ ತೊಡಿ ಗಡಿಯನ್ನ ಗುರುತಿಸಲಾಗಿದೆ.

ಒತ್ತುವರಿದಾರರು ಸಹ ಕಾರ್ಯಾಚರಣೆಗೆ ಸಹಕರಿಸಿದ್ದಾರೆ, ನಿರ್ಮಿತಿ ಕೇಂದ್ರದಿಂದ ಕಾಂಪೌಂಡ್ ನಿರ್ಮಾಣ ಮಾಡಿ, ಮುಂದಿನ ದಿನಗಳಲ್ಲಿ ಒತ್ತುವರಿಯಾಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪ ತಹಶೀಲ್ದಾರ್ ವೆಂಕಟೇಶ್ ಮೂರ್ತಿ ತಿಳಿಸಿದರು.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

13 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

15 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

21 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

22 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

1 day ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 day ago