1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಭೂಮಿ ಒತ್ತುವರಿ ತೆರವು: ಸುಮಾರು 70 ಲಕ್ಷ ಮೌಲ್ಯದ ಜಾಗ ಸರ್ಕಾರ ವಶ

ದೊಡ್ಡಬಳ್ಳಾಪುರ ತಾಲೂಕಿನ‌ ಕಾರನಾಳ ಗ್ರಾಮದ ಸರ್ವೇ ನಂಬರ್ 49ರಲ್ಲಿ 1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಜಾಗವನ್ನ ಸುತ್ತಮುತ್ತಲಿನ 5 ಮಂದಿ ಒತ್ತುವರಿ ಮಾಡಿದ್ದರು. ಈ ಒತ್ತುವರಿ ಭೂಮಿಯನ್ನು ಲೋಕಾಯುಕ್ತರ ಆದೇಶದ ಮೇರೆಗೆ ಕಾರ್ಯಾಚರಣೆ ನಡೆಸಿದ ಕಂದಾಯ ಇಲಾಖೆಯ ಅಧಿಕಾರಿಗಳು ಜೆಸಿಬಿ ಮೂಲಕ ತೆರವು ಕಾರ್ಯಾ ನಡೆಸಿದ್ದಾರೆ. ಈ ಮೂಲಕ ಸುಮಾರು 70 ಲಕ್ಷ ಮೌಲ್ಯದ ಜಾಗವನ್ನ ಸರ್ಕಾರದ ವಶಕ್ಕೆ ಪಡೆದಿದ್ದಾರೆ.

ಕಾರನಾಳ ಗ್ರಾಮದ ಸರ್ವೆ ನಂಬರ್ 49ರಲ್ಲಿ 1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಜಾಗವನ್ನ ಸುತ್ತಮುತ್ತಲಿನ 5 ಮಂದಿ ಒತ್ತುವರಿ ಮಾಡಿದ್ದರು, ನಂಜಪ್ಪ, ಸಂಜೀವರಾಯಪ್ಪ, ನಾರಾಯಣಪ್ಪ , ರವಿ.ಕವಿತಾ ಒತ್ತುವರಿ ಮಾಡಿದ್ದರು. ಒತ್ತುವರಿ ಮಾಡಿದ ಜಾಗದಲ್ಲಿ ಮನೆ ಮತ್ತು ತೆಂಗಿನ ಮರಗಳನ್ನ ಹಾಕಿಕೊಂಡಿದ್ದರು. ಒತ್ತುವರಿ ತೆರವು ಮಾಡುವಂತೆ ವೆಂಕಟೇಶಪ್ಪ ಎಂಬುವವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಲೋಕಾಯುಕ್ತರ ಆದೇಶದ ಮೇರೆಗೆ ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಒತ್ತುವರಿ ಭೂಮಿಯನ್ನು ತೆರವುಗೊಳಿಸಿದ್ದಾರೆ.

ಉಪ ತಹಶೀಲ್ದಾರ್ ವೆಂಕಟೇಶ್ ಮೂರ್ತಿ, ತೂಬಗೆರೆ ಹೋಬಳಿ ರಾಜಸ್ವ ಅಧಿಕಾರಿ ನರಸಿಂಹ ಮತ್ತು ಭೂಮಾಪನ ಇಲಾಖೆಯ ಸಿಬ್ಬಂದಿ ಒತ್ತುವರಿ ತೆರವು ಕಾರ್ಯದಲ್ಲಿ ಭಾಗಿಯಾಗಿದ್ದರು.

ಒತ್ತುವರಿ ಜಾಗದಲ್ಲಿ ಕಟ್ಟಲಾಗಿದ್ದ ಮನೆಯನ್ನ ಜೆಸಿಬಿ ಮೂಲಕ ಕೆಡವಲಾಗಿದ್ದು, ಒತ್ತುವರಿ ಜಾಗವನ್ನ ಗುರುತಿಸಿ ಟ್ರಂಚ್ ತೊಡಿ ಗಡಿಯನ್ನ ಗುರುತಿಸಲಾಗಿದೆ.

ಒತ್ತುವರಿದಾರರು ಸಹ ಕಾರ್ಯಾಚರಣೆಗೆ ಸಹಕರಿಸಿದ್ದಾರೆ, ನಿರ್ಮಿತಿ ಕೇಂದ್ರದಿಂದ ಕಾಂಪೌಂಡ್ ನಿರ್ಮಾಣ ಮಾಡಿ, ಮುಂದಿನ ದಿನಗಳಲ್ಲಿ ಒತ್ತುವರಿಯಾಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪ ತಹಶೀಲ್ದಾರ್ ವೆಂಕಟೇಶ್ ಮೂರ್ತಿ ತಿಳಿಸಿದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

3 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

14 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

15 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

20 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

22 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago