ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ ದುಃಖದ ನಡುವೆಯೂ, ಕುಟುಂಬಸ್ಥರು ಮಗುವಿನ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾನವೀಯತೆಯ ಉದಾತ್ತ ಸಂದೇಶ ನೀಡಿದ್ದಾರೆ.
ಮೃತ ಮಗುವಿನ ಕಣ್ಣುಗಳನ್ನು ದಾನ ಮಾಡಲು ತಂದೆ-ತಾಯಿ ಹಾಗೂ ಕುಟುಂಬದವರು ಮುಂದಾಗಿದ್ದು, ಈ ಮೂಲಕ ಪೋಷಕ್ ದೊಡ್ಡಬಳ್ಳಾಪುರದ ನೇತ್ರದಾನಿಗಳ ಪೈಕಿ ಅತ್ಯಂತ ಕಿರಿಯ ವಯಸ್ಸಿನ ನೇತ್ರದಾನಿಯಾಗಿ ಮಾದರಿಯಾಗಿದ್ದಾನೆ.
ಮಗುವಿನ ಕಣ್ಣುಗಳನ್ನು ಬೆಂಗಳೂರಿನ ಡಾ.ರಾಜ್ ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರಕ್ಕೆ ದಾನ ಮಾಡಲಾಗಿದೆ. ದುಃಖದ ಸಂದರ್ಭದಲ್ಲಿಯೂ ಸಮಾಜಮುಖಿ ಚಿಂತನೆ ತೋರಿದ ಕುಟುಂಬದ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
ಈ ನೇತ್ರದಾನದೊಂದಿಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಒಟ್ಟು ನೇತ್ರದಾನಗಳ ಸಂಖ್ಯೆ 2874ಕ್ಕೆ ಏರಿಕೆಯಾಗಿದೆ.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…