ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ ದುಃಖದ ನಡುವೆಯೂ, ಕುಟುಂಬಸ್ಥರು ಮಗುವಿನ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾನವೀಯತೆಯ ಉದಾತ್ತ ಸಂದೇಶ ನೀಡಿದ್ದಾರೆ.
ಮೃತ ಮಗುವಿನ ಕಣ್ಣುಗಳನ್ನು ದಾನ ಮಾಡಲು ತಂದೆ-ತಾಯಿ ಹಾಗೂ ಕುಟುಂಬದವರು ಮುಂದಾಗಿದ್ದು, ಈ ಮೂಲಕ ಪೋಷಕ್ ದೊಡ್ಡಬಳ್ಳಾಪುರದ ನೇತ್ರದಾನಿಗಳ ಪೈಕಿ ಅತ್ಯಂತ ಕಿರಿಯ ವಯಸ್ಸಿನ ನೇತ್ರದಾನಿಯಾಗಿ ಮಾದರಿಯಾಗಿದ್ದಾನೆ.
ಮಗುವಿನ ಕಣ್ಣುಗಳನ್ನು ಬೆಂಗಳೂರಿನ ಡಾ.ರಾಜ್ ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರಕ್ಕೆ ದಾನ ಮಾಡಲಾಗಿದೆ. ದುಃಖದ ಸಂದರ್ಭದಲ್ಲಿಯೂ ಸಮಾಜಮುಖಿ ಚಿಂತನೆ ತೋರಿದ ಕುಟುಂಬದ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
ಈ ನೇತ್ರದಾನದೊಂದಿಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಒಟ್ಟು ನೇತ್ರದಾನಗಳ ಸಂಖ್ಯೆ 2874ಕ್ಕೆ ಏರಿಕೆಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…