ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ ದುಃಖದ ನಡುವೆಯೂ, ಕುಟುಂಬಸ್ಥರು ಮಗುವಿನ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾನವೀಯತೆಯ ಉದಾತ್ತ ಸಂದೇಶ ನೀಡಿದ್ದಾರೆ.
ಮೃತ ಮಗುವಿನ ಕಣ್ಣುಗಳನ್ನು ದಾನ ಮಾಡಲು ತಂದೆ-ತಾಯಿ ಹಾಗೂ ಕುಟುಂಬದವರು ಮುಂದಾಗಿದ್ದು, ಈ ಮೂಲಕ ಪೋಷಕ್ ದೊಡ್ಡಬಳ್ಳಾಪುರದ ನೇತ್ರದಾನಿಗಳ ಪೈಕಿ ಅತ್ಯಂತ ಕಿರಿಯ ವಯಸ್ಸಿನ ನೇತ್ರದಾನಿಯಾಗಿ ಮಾದರಿಯಾಗಿದ್ದಾನೆ.
ಮಗುವಿನ ಕಣ್ಣುಗಳನ್ನು ಬೆಂಗಳೂರಿನ ಡಾ.ರಾಜ್ ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರಕ್ಕೆ ದಾನ ಮಾಡಲಾಗಿದೆ. ದುಃಖದ ಸಂದರ್ಭದಲ್ಲಿಯೂ ಸಮಾಜಮುಖಿ ಚಿಂತನೆ ತೋರಿದ ಕುಟುಂಬದ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
ಈ ನೇತ್ರದಾನದೊಂದಿಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಒಟ್ಟು ನೇತ್ರದಾನಗಳ ಸಂಖ್ಯೆ 2874ಕ್ಕೆ ಏರಿಕೆಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…