1.37 ಕೋಟಿ ಮೌಲ್ಯದ ಮಾದಕ ವಸ್ತುಗಳ ವಶ

ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತುಗಳ ಅಕ್ರಮ ಮಾರಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದ ಬಗ್ಗೆ ಮಾಹಿತಿ ನೀಡಿದರು. ದಾಳಿಯ ವೇಳೆ 975 ಗ್ರಾಂ ಎಂಡಿಎಂಎ ಕ್ರಿಸ್ಟಲ್‌ಗಳು, 407 ಗ್ರಾಂ ಕೊಕೈನ್, ಎರಡು ಇಲೆಕ್ಟ್ರಾನಿಕ್ ತೂಕದ ಮಾಪಕ ಯಂತ್ರಗಳು ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಒಟ್ಟು ₹1.37 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್ ಹೇಳಿದರು.

ಗಿರಿನಗರ ಪೊಲೀಸ್ ಠಾಣೆಯು ಇತ್ತೀಚಿನ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಹೈದರಾಬಾದ್‌ನಲ್ಲಿ ಮತ್ತೊಂದು ಪ್ರಕರಣದಲ್ಲಿ ಈಗಾಗಲೇ ತನಿಖೆಯಲ್ಲಿರುವ ಈ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಒಟ್ಟಾರೆಯಾಗಿ ₹24.15 ಲಕ್ಷ ಮೌಲ್ಯದ 310 ಗ್ರಾಂ ಚಿನ್ನಾಭರಣಗಳು ಮತ್ತು ಎರಡು ದ್ವಿಚಕ್ರ ವಾಹನಗಳನ್ನು ಇವರಿಂದ ವಶಪಡಿಸಿಕೊಳ್ಳಲಾಗಿದೆ. ನಗರದಾದ್ಯಂತ ದಾಖಲಾಗಿರುವ ಇಂತಹ 8 ಪ್ರಕರಣಗಳಿಗೆ ಈ ವಸ್ತುಗಳು ಸಂಬಂಧಿಸಿವೆ ಎಂದು ಹೇಳಿದರು.

ಪೀಣ್ಯ ಪೊಲೀಸರು ಎರಡು ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 05 ಆರೋಪಿಗಳನ್ನು ಬಂಧಿಸಿದ್ದು, 325 ಗ್ರಾಂ ಚಿನ್ನಾಭರಣ, 1.8 ಕೆಜಿ ಬೆಳ್ಳಿ ವಸ್ತುಗಳು, ಒಂದು ಗಡಿಯಾರ, ಒಂದು ಲ್ಯಾಪ್‌ಟಾಪ್ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ₹21 ಲಕ್ಷ ಆಗಿದೆ ಎಂದು ತಿಳಿಸಿದರು.

ಮೈಕೋ ಲೇಔಟ್ ಪೊಲೀಸ್ ಠಾಣೆ ಪೊಲೀಸರು ದ್ವಿಚಕ್ರ ವಾಹನ ಕಳ್ಳತನದಲ್ಲಿ ತೊಡಗಿದ್ದ ಆರು ಜನ ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ₹11,60,000 ಮೌಲ್ಯದ 29 ಕಳವು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 17 ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಕಳ್ಳತನಗಳು ನಡೆದಿವೆ. ವಶಕ್ಕೆ ಪಡೆದಿರುವ ಇನ್ನೂ 12 ದ್ವಿಚಕ್ರ ವಾಹನಗಳ ನಿಜ ವಾರಸುದಾರರನ್ನ ಪತ್ತೆ ಮಾಡುವ ಕಾರ್ಯ ಮುಂದುವರೆದಿದೆ ಎಂದರು.

ಬೆಳ್ಳಂದೂರು ಪೊಲೀಸ್ ಠಾಣೆಯವರು ಹಲವಾರು ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್ ಕಳ್ಳತನಗಳಿಗೆ ಸಂಬಂಧಿಸಿದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು, ₹10 ಲಕ್ಷ ಮೌಲ್ಯದ 16 ಲ್ಯಾಪ್‌ಟಾಪ್‌ಗಳು, 1 ಐಪ್ಯಾಡ್ ಮತ್ತು 4 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಂಧನದಿಂದ ಬೆಳ್ಳಂದೂರು ಮತ್ತು ಬಂಡೇಪಾಳ್ಯ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 2 ಲ್ಯಾಪ್‌ಟಾಪ್ ಕಳ್ಳತನದ ಪ್ರಕರಣಗಳು ಪತ್ತೆಯಾಗಿವೆ. ಉಳಿದ 12 ಲ್ಯಾಪ್‌ಟಾಪ್‌ಗಳು ಮತ್ತು 4 ಮೊಬೈಲ್ ಫೋನ್‌ಗಳ ನೈಜ ಮಾಲೀಕರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

15 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

18 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago