ವಿಶೇಷವಾಗಿ ವಿನ್ಯಾಸಗೊಳಿಸಿದ ಜೀನ್ಸ್ ಮತ್ತು ಟೀ ಶರ್ಟ್ಗಳ ಪದರಗಳಲ್ಲಿ ಅಂಟಿಸಿ ಅರೆ-ಪೌಡರ್ ರೂಪದಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದ ನಾಲ್ಕು ಪ್ರಯಾಣಿಕರನ್ನು (3 ಪುರುಷರು ಮತ್ತು 1 ಮಹಿಳೆ) ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ದುಬೈನಿಂದ ಇಕೆ-568 ವಿಮಾನದ ಮೂಲಕ ಬೆಂಗಳೂರಿಗೆ ಈ ನಾಲ್ಕು ಮಂದಿ ಪ್ರಯಾಣಿಕರು ಬಂದಿಳಿದಿದ್ದರು. ಆಗ ಸೂಕ್ತ ತಪಾಸಣೆ ನಡೆಸಿ 1.96 ಕೋಟಿ ಮೌಲ್ಯದ ಒಟ್ಟು 2814.36 ಗ್ರಾಂ ತೂಕದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಅದೇರೀತಿ, ದುಬೈನಿಂದ IX384 ಮೂಲಕ ಆಗಮಿಸಿದ ಏರ್ ಪ್ರಯಾಣಿಕ ಮೂರು ಅಂಡಾಕಾರದ ರೂಪದಲ್ಲಿ 59.3 ಲಕ್ಷ ಮೌಲ್ಯದ 24 Ktನ 828 ಗ್ರಾಂ ಚಿನ್ನವನ್ನು ಮರೆಮಾಚಿ ಸಾಗಾಟ ಮಾಡಲು ಯತ್ನಿಸಿದಾಗ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ ಪಡೆದಿದ್ದಾರೆ. ಕೂಡಲೇ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…