ದಾಖಲೆಯ 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಗುರುವಾರ ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್ಡಿಎ ಬಲಪ್ರದರ್ಶನದ ನಡುವೆ ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಬಿಹಾರ ರಾಜ್ಯಪಾಲ ಆರಿಫ್ ಮೊಹ್ಮದ್ ಖಾನ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ನಂತರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಇತರ ಹಲವಾರು ಕೇಂದ್ರ ಸಚಿವರು ಮತ್ತು 11 ಎನ್ಡಿಎ-ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
243 ಸದಸ್ಯರ ವಿಧಾನಸಭೆಯಲ್ಲಿ ಎನ್ಡಿಎ 202 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಬಿಜೆಪಿ 89, ಜೆಡಿ(ಯು) 85, ಎಲ್ಜೆಪಿ(ಆರ್ವಿ) 19, ಎಚ್ಎಎಂ 5 ಮತ್ತು ಆರ್ಎಲ್ಎಂ 4 ಸ್ಥಾನಗಳನ್ನು ಗೆದ್ದುಕೊಂಡಿದೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…