ಉತ್ತರ ಪ್ರದೇಶದ ಲಲಿತ್ಪುರ ಜಿಲ್ಲೆಯ 45 ವರ್ಷದ ವ್ಯಕ್ತಿಯೊಬ್ಬ ತನ್ನ 10 ವರ್ಷದ ಮಗಳ ಕಾಲುಗಳಿಗೆ ಹಗ್ಗದಿಂದ ಕಟ್ಟಿ ಮನೆಯ ಮೇಲ್ಛಾವಣಿಗೆ ತಲೆಕೆಳಗಾಗಿ ನೇತಾಕಿದ್ದಾನೆ.
ಬಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಧಮ್ನಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಾನುಷವಾಗಿ ನಡೆದುಕೊಂಡ ಆರೋಪದ ಮೇಲೆ ಕ್ರೂರ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ತಂದೆ ಗೋವಿಂದ್ ರಾಯ್ ರೈಕ್ವಾರ್ ತನ್ನ ಮಗಳನ್ನು ಹಿಂಸಿಸಿದ್ದಾನೆ ಎಂದು ಸೋಮವಾರ ಬಾರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ರಾಜಾ ದಿನೇಶ್ ಸಿಂಗ್ ಹೇಳಿದ್ದಾರೆ.
“ಅಪ್ಪಾ, ದಯವಿಟ್ಟು ನನ್ನನ್ನು ಬಿಟ್ಟುಬಿಡು” ಎಂದು ಮಗಳು ಪರಿಪರಿಯಾಗಿ ಕೇಳಿಕೊಂಡರು ಪಾಪಿ ತಂದೆ ಕ್ರೂರವಾಗಿ ನಡೆದುಕೊಂಡಿದ್ದಾನೆ. ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಈ ಕ್ರೌರ್ಯವನ್ನು ಕಂಡ ಸ್ಥಳೀಯ ಗ್ರಾಮಸ್ಥರೊಬ್ಬರು ಮಧ್ಯಪ್ರವೇಶಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ಈ ವಿಷಯವನ್ನು ಬಾರ್ ಪೊಲೀಸ್ ಠಾಣೆಗೆ ವರದಿ ಮಾಡಲಾಗಿದ್ದು, ಅಲ್ಲಿ ಸಬ್ ಇನ್ಸ್ಪೆಕ್ಟರ್ ಮಹೇಂದ್ರ ಸಿಂಗ್ ಅವರು ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ಕೂಡಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…