ಬೆಂಗಳೂರು ನಗರದ ಜನತೆಯ ಅನುಕೂಲಕ್ಕಾಗಿ ಮೊದಲ ಹಂತದಲ್ಲಿ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಇನ್ನೂ ಒಟ್ಟು 840 ನೂತನ ಬಸ್ಗಳು ಬಿಎಂಟಿಸಿ ಗೆ ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ ಬಸ್ ಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದಲ್ಲದೆ, ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ ಎಂದರು.
ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಹೇಳಿದರು.
ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ ಎಂದರು.
ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ ಎಂದು ತಿಳಿಸಿದರು.
ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ ಎಂದರು.
ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4-5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್ ಗಳನ್ನು ಖರೀದಿಸಿ ಸವಲತ್ತು ಒದಗಿಸಿದ್ದೇವೆ ಎಂದು ಹೇಳಿದರು.
ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ವಸತಿ ಸಚಿವರಾದ ಜಮೀರ್ ಅಹಮದ್ ಖಾನ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಕೆ.ಕೆ.ಆರ್.ಡಿ.ಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…