100 ನೂತನ ಬಿಎಂಟಿಸಿ ಬಸ್ ಗಳ ಲೋಕಾರ್ಪಣೆ

ಬೆಂಗಳೂರು ನಗರದ ಜನತೆಯ ಅನುಕೂಲಕ್ಕಾಗಿ ಮೊದಲ ಹಂತದಲ್ಲಿ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಇನ್ನೂ ಒಟ್ಟು 840 ನೂತನ‌ ಬಸ್‌ಗಳು ಬಿಎಂಟಿಸಿ ಗೆ ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ ಬಸ್ ಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದಲ್ಲದೆ, ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ ಎಂದರು.

ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಹೇಳಿದರು.

ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ ಎಂದರು.

ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ ಎಂದು ತಿಳಿಸಿದರು.

ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ ಎಂದರು.

ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4-5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್ ಗಳನ್ನು‌ ಖರೀದಿಸಿ ಸವಲತ್ತು ಒದಗಿಸಿದ್ದೇವೆ ಎಂದು ಹೇಳಿದರು.

ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ವಸತಿ ಸಚಿವರಾದ ಜಮೀರ್ ಅಹಮದ್ ಖಾನ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಕೆ.ಕೆ.ಆರ್.ಡಿ.ಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

59 minutes ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 hour ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

5 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

13 hours ago