1000 ಎಲ್ ಇಡಿ ಬೀದಿ ದೀಪಗಳನ್ನು ವಿತರಿಸಿದ ಶಾಸಕ ಧೀರಜ್ ಮುನಿರಾಜ್: ಸಂತಸ ವ್ಯಕ್ತಪಡಿಸಿದ ನಗರಸಭಾ ಸದಸ್ಯರು

ನಗರಸಭೆ ವ್ಯಾಪ್ತಿಯ 31 ವಾರ್ಡ್ ಗಳಲ್ಲಿ ಬೀದಿ ದೀಪಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಧೀರಜ್ ಮುನಿರಾಜ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ನಗರಸಭೆ ಆವರಣದಲ್ಲಿಂದು ನಗರಸಭೆ ಆಡಳಿತಕ್ಕೆ ಎಲ್ ಇಡಿ ಬೀದಿ ದೀಪಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.

2023-24ರ ಶಾಸಕರ ನಿಧಿ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿಯಲ್ಲಿ 15 ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ಸುಮಾರು 1000 ಬೀದಿ ದೀಪಗಳನ್ನು ನಗರಸಭೆ ಅಧ್ಯಕ್ಷೆ ಸುಮಿತ್ರಾ, ಪೌರಾಯುಕ್ತ ಕಾರ್ತಿಕೇಶ್ಚರ್, ನಗರಸಭೆ ಸಮ್ಮುಖದಲ್ಲಿ ನಗರಸಭೆ ಆಡಳಿತಕ್ಕೆ ಹಸ್ತಾಂತರಿಸಲಾಗಿದೆ ಎಂದರು.

ಪ್ರತಿ ವಾರ್ಡ್ ಗೆ 30 ಬೀದಿ ದೀಪಗಳನ್ನು ನೀಡಲು ಸೂಚಿಸಲಾಗಿದೆ. ಇದನ್ನು ಸೂಕ್ತ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ವಾರ್ಡ್ ಗಳಿಗೆ ಎಲ್ ಇಡಿ ಬೀದಿ ದೀಪಗಳನ್ನು ವಿತರಿಸಿರುವುದಕ್ಕೆ ನಗರಸಭಾ ಸದಸ್ಯರು ಸಂತಸ ವ್ಯಕ್ತಪಡಿಸಿದರು. ಈ ವೇಳೆ ಶಾಸಕ ಧೀರಜ್ ಮುನಿರಾಜ್ ಅವರಿಗೆ ಅಭಿನಂದನೆಗಳನ್ನು ಸಹ ಸಲ್ಲಿಸಿದರು.

ಈ ವೇಳೆ ನಗರಸಭೆ ಸದಸ್ಯರಾದ ಬಂತಿ ವೆಂಕಟೇಶ್, ಶಿವು, ಭಾಸ್ಕರ್, ವತ್ಸಲಾ, ವಡ್ಡರಹಳ್ಳಿ ರವಿ, ಪದ್ಮನಾಭ್, ಲಕ್ಣ್ಮೀಪತಿ, ನಾಗರತ್ನ, ಹಂಸಪ್ರಿಯಾ, ಹಸೀನಾ ತಾಜ್, ಪ್ರಭಾ‌ನಾಗಾರಜ್, ನಾಗರತ್ನಮ್ಮ,‌ ಇಂದ್ರಾಣಿ, ಆದಿಲಕ್ಷ್ಮಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

6 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

8 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

8 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

8 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

11 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

14 hours ago