1000 ಎಲ್ ಇಡಿ ಬೀದಿ ದೀಪಗಳನ್ನು ವಿತರಿಸಿದ ಶಾಸಕ ಧೀರಜ್ ಮುನಿರಾಜ್: ಸಂತಸ ವ್ಯಕ್ತಪಡಿಸಿದ ನಗರಸಭಾ ಸದಸ್ಯರು

ನಗರಸಭೆ ವ್ಯಾಪ್ತಿಯ 31 ವಾರ್ಡ್ ಗಳಲ್ಲಿ ಬೀದಿ ದೀಪಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಧೀರಜ್ ಮುನಿರಾಜ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ನಗರಸಭೆ ಆವರಣದಲ್ಲಿಂದು ನಗರಸಭೆ ಆಡಳಿತಕ್ಕೆ ಎಲ್ ಇಡಿ ಬೀದಿ ದೀಪಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.

2023-24ರ ಶಾಸಕರ ನಿಧಿ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿಯಲ್ಲಿ 15 ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ಸುಮಾರು 1000 ಬೀದಿ ದೀಪಗಳನ್ನು ನಗರಸಭೆ ಅಧ್ಯಕ್ಷೆ ಸುಮಿತ್ರಾ, ಪೌರಾಯುಕ್ತ ಕಾರ್ತಿಕೇಶ್ಚರ್, ನಗರಸಭೆ ಸಮ್ಮುಖದಲ್ಲಿ ನಗರಸಭೆ ಆಡಳಿತಕ್ಕೆ ಹಸ್ತಾಂತರಿಸಲಾಗಿದೆ ಎಂದರು.

ಪ್ರತಿ ವಾರ್ಡ್ ಗೆ 30 ಬೀದಿ ದೀಪಗಳನ್ನು ನೀಡಲು ಸೂಚಿಸಲಾಗಿದೆ. ಇದನ್ನು ಸೂಕ್ತ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ವಾರ್ಡ್ ಗಳಿಗೆ ಎಲ್ ಇಡಿ ಬೀದಿ ದೀಪಗಳನ್ನು ವಿತರಿಸಿರುವುದಕ್ಕೆ ನಗರಸಭಾ ಸದಸ್ಯರು ಸಂತಸ ವ್ಯಕ್ತಪಡಿಸಿದರು. ಈ ವೇಳೆ ಶಾಸಕ ಧೀರಜ್ ಮುನಿರಾಜ್ ಅವರಿಗೆ ಅಭಿನಂದನೆಗಳನ್ನು ಸಹ ಸಲ್ಲಿಸಿದರು.

ಈ ವೇಳೆ ನಗರಸಭೆ ಸದಸ್ಯರಾದ ಬಂತಿ ವೆಂಕಟೇಶ್, ಶಿವು, ಭಾಸ್ಕರ್, ವತ್ಸಲಾ, ವಡ್ಡರಹಳ್ಳಿ ರವಿ, ಪದ್ಮನಾಭ್, ಲಕ್ಣ್ಮೀಪತಿ, ನಾಗರತ್ನ, ಹಂಸಪ್ರಿಯಾ, ಹಸೀನಾ ತಾಜ್, ಪ್ರಭಾ‌ನಾಗಾರಜ್, ನಾಗರತ್ನಮ್ಮ,‌ ಇಂದ್ರಾಣಿ, ಆದಿಲಕ್ಷ್ಮಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

2 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

3 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

9 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

21 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

21 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

22 hours ago