Categories: Crime

1000 ರೂ. ವಿಚಾರಕ್ಕೆ ಕಿರಿಕ್: ಇಬ್ಬರಿಗೆ ಚಾಕು ಇರಿತ

1000 ರೂ. ವಿಚಾರಕ್ಕೆ ಕಿರಿಕ್ ಆಗಿ ಇಬ್ಬರಿಗೆ ಚಾಕು ಇರಿಯಲಾಗಿದೆ. ಈ ಘಟನೆ ಇಂದು ಬೆಳಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚೇತನ್ ಮತ್ತು ಸುದೀಪ್ ಇರಿತಕ್ಕೊಳಗಾದವರು.

2 ವರ್ಷದ ಹಿಂದೆ ಸುದೀಪ್ ಗೆ ಯುವತಿಯೊಬ್ಬಳ ಜೊತೆ ಪ್ರೀತಿಯಾಗಿತ್ತು. ಆವಾಗ ಪ್ರಿಯತಮೆಗೆ 2 ಸಾವಿರ ರೂ. ಹಣವನ್ನು ಸಾಲದ ರೂಪದಲ್ಲಿ ಸುದೀಪ್ ಕೊಟ್ಟಿದ್ದ. ಇದಾದ ನಂತರ ಕೆಲ ತಿಂಗಳ ಹಿಂದೆ ಈ ಜೋಡಿ ನಡುವೆ ಬ್ರೇಕಪ್ ಆಗಿದೆ. ಬ್ರೇಕಪ್ ಆದ ನಂತರ ಮಾಜಿ ಪ್ರಿಯತಮೆ ಬಳಿ ಕೊಟ್ಟಿರುವ 2 ಸಾವಿರ ಹಣವನ್ನು ವಾಪಸ್ ನೀಡುವಂತೆ ಸುದೀಪ್ ಕೇಳಿದ್ದಾನೆ. 2000 ರೂ. ನಲ್ಲಿ ಸುದೀಪ್ ಗೆ 1000 ರೂ. ವಾಪಸ್ ಯುವತಿ ಕೊಟ್ಟಿದ್ದಳು. ಇನ್ನು ಉಳಿದ ಒಂದು ಸಾವಿರ ಕೊಡುವಂತೆ ಯುವತಿಗೆ ಫೋನ್ ಮಾಡಿ ಸುದೀಪ್ ಕೇಳಿದ್ದಾನೆ.

ಈ ವಿಚಾರ ಕೆಲ ಪುಂಡರಿಗೆ ಈ ಯುವತಿ ಸುದೀಪ್ ಮೇಲೆ ದೂರು ನೀಡಿದ್ದಾಳೆ. ಮೂರು ದಿನದ ಹಿಂದೆ ಜ್ಯೂಸ್ ಅಂಗಡಿ ಬಳಿ ನಾಲ್ಕೈದು ಜನ ಬಂದು ಯುವತಿ ಬಳಿ ಹಣ ಕೇಳ್ತೀಯಾ ಅಂತ ಹೇಳಿ ಅವರೇ 1000 ಸಾವಿರ ಫೋನ್ ಪೇ ಮಾಡಿ ಹೋಗಿದ್ದರು. ಇಷ್ಟಾದರು. ಮತ್ತೆ ಈ‌‌ ಸುದೀಪ್ ಆ ಯುವತಿ ಬಳಿ ಹಣ‌ ಹಾಕಿಸಿಕೊಳ್ಳುತ್ತಾನೆ.‌ಇದಕ್ಕೆ ಕುಪಿತಗೊಂಡ ಯುವಕರು ಅದೇ ದಿನ ಸಂಜೆ ಬಂದು ಯುವತಿ ಹಣ ಕೊಟ್ಟಿದ್ದರೂ ಮತ್ತೆ ಹಣ ಹಾಕಿಸಿಕೊಳ್ತೀಯಾ ಎಂದು ಗಲಾಟೆ ಮಾಡಿ ಸುದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ.

ಸುದೀಪ್ ಗೆ ಹಲ್ಲೆ ಮಾಡುತ್ತಿದ್ದ ವೇಳೆ ಬಿಡಿಸಲು ಬಂದ ಚೇತನ್ ಗೂ ಚಾಕು ಇರಿಯಲಾಗಿದೆ. ಚೇತನ್ ನ ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದೆ. ಸುದೀಪ್ ಬೆನ್ನಿಗೆ ಇರಿದು ಯುವಕರು ಎಸ್ಕೇಪ್ ಆಗಿದ್ದಾರೆ. ಬಿಡಿಸಲು ಬಂದವನು ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾನೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

60 minutes ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

13 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

13 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

13 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

13 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

17 hours ago