Oplus_0
1000 ರೂ. ವಿಚಾರಕ್ಕೆ ಕಿರಿಕ್ ಆಗಿ ಇಬ್ಬರಿಗೆ ಚಾಕು ಇರಿಯಲಾಗಿದೆ. ಈ ಘಟನೆ ಇಂದು ಬೆಳಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚೇತನ್ ಮತ್ತು ಸುದೀಪ್ ಇರಿತಕ್ಕೊಳಗಾದವರು.
2 ವರ್ಷದ ಹಿಂದೆ ಸುದೀಪ್ ಗೆ ಯುವತಿಯೊಬ್ಬಳ ಜೊತೆ ಪ್ರೀತಿಯಾಗಿತ್ತು. ಆವಾಗ ಪ್ರಿಯತಮೆಗೆ 2 ಸಾವಿರ ರೂ. ಹಣವನ್ನು ಸಾಲದ ರೂಪದಲ್ಲಿ ಸುದೀಪ್ ಕೊಟ್ಟಿದ್ದ. ಇದಾದ ನಂತರ ಕೆಲ ತಿಂಗಳ ಹಿಂದೆ ಈ ಜೋಡಿ ನಡುವೆ ಬ್ರೇಕಪ್ ಆಗಿದೆ. ಬ್ರೇಕಪ್ ಆದ ನಂತರ ಮಾಜಿ ಪ್ರಿಯತಮೆ ಬಳಿ ಕೊಟ್ಟಿರುವ 2 ಸಾವಿರ ಹಣವನ್ನು ವಾಪಸ್ ನೀಡುವಂತೆ ಸುದೀಪ್ ಕೇಳಿದ್ದಾನೆ. 2000 ರೂ. ನಲ್ಲಿ ಸುದೀಪ್ ಗೆ 1000 ರೂ. ವಾಪಸ್ ಯುವತಿ ಕೊಟ್ಟಿದ್ದಳು. ಇನ್ನು ಉಳಿದ ಒಂದು ಸಾವಿರ ಕೊಡುವಂತೆ ಯುವತಿಗೆ ಫೋನ್ ಮಾಡಿ ಸುದೀಪ್ ಕೇಳಿದ್ದಾನೆ.
ಈ ವಿಚಾರ ಕೆಲ ಪುಂಡರಿಗೆ ಈ ಯುವತಿ ಸುದೀಪ್ ಮೇಲೆ ದೂರು ನೀಡಿದ್ದಾಳೆ. ಮೂರು ದಿನದ ಹಿಂದೆ ಜ್ಯೂಸ್ ಅಂಗಡಿ ಬಳಿ ನಾಲ್ಕೈದು ಜನ ಬಂದು ಯುವತಿ ಬಳಿ ಹಣ ಕೇಳ್ತೀಯಾ ಅಂತ ಹೇಳಿ ಅವರೇ 1000 ಸಾವಿರ ಫೋನ್ ಪೇ ಮಾಡಿ ಹೋಗಿದ್ದರು. ಇಷ್ಟಾದರು. ಮತ್ತೆ ಈ ಸುದೀಪ್ ಆ ಯುವತಿ ಬಳಿ ಹಣ ಹಾಕಿಸಿಕೊಳ್ಳುತ್ತಾನೆ.ಇದಕ್ಕೆ ಕುಪಿತಗೊಂಡ ಯುವಕರು ಅದೇ ದಿನ ಸಂಜೆ ಬಂದು ಯುವತಿ ಹಣ ಕೊಟ್ಟಿದ್ದರೂ ಮತ್ತೆ ಹಣ ಹಾಕಿಸಿಕೊಳ್ತೀಯಾ ಎಂದು ಗಲಾಟೆ ಮಾಡಿ ಸುದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ.
ಸುದೀಪ್ ಗೆ ಹಲ್ಲೆ ಮಾಡುತ್ತಿದ್ದ ವೇಳೆ ಬಿಡಿಸಲು ಬಂದ ಚೇತನ್ ಗೂ ಚಾಕು ಇರಿಯಲಾಗಿದೆ. ಚೇತನ್ ನ ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದೆ. ಸುದೀಪ್ ಬೆನ್ನಿಗೆ ಇರಿದು ಯುವಕರು ಎಸ್ಕೇಪ್ ಆಗಿದ್ದಾರೆ. ಬಿಡಿಸಲು ಬಂದವನು ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾನೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…