Categories: Crime

1000 ರೂ. ವಿಚಾರಕ್ಕೆ ಕಿರಿಕ್: ಇಬ್ಬರಿಗೆ ಚಾಕು ಇರಿತ

1000 ರೂ. ವಿಚಾರಕ್ಕೆ ಕಿರಿಕ್ ಆಗಿ ಇಬ್ಬರಿಗೆ ಚಾಕು ಇರಿಯಲಾಗಿದೆ. ಈ ಘಟನೆ ಇಂದು ಬೆಳಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚೇತನ್ ಮತ್ತು ಸುದೀಪ್ ಇರಿತಕ್ಕೊಳಗಾದವರು.

2 ವರ್ಷದ ಹಿಂದೆ ಸುದೀಪ್ ಗೆ ಯುವತಿಯೊಬ್ಬಳ ಜೊತೆ ಪ್ರೀತಿಯಾಗಿತ್ತು. ಆವಾಗ ಪ್ರಿಯತಮೆಗೆ 2 ಸಾವಿರ ರೂ. ಹಣವನ್ನು ಸಾಲದ ರೂಪದಲ್ಲಿ ಸುದೀಪ್ ಕೊಟ್ಟಿದ್ದ. ಇದಾದ ನಂತರ ಕೆಲ ತಿಂಗಳ ಹಿಂದೆ ಈ ಜೋಡಿ ನಡುವೆ ಬ್ರೇಕಪ್ ಆಗಿದೆ. ಬ್ರೇಕಪ್ ಆದ ನಂತರ ಮಾಜಿ ಪ್ರಿಯತಮೆ ಬಳಿ ಕೊಟ್ಟಿರುವ 2 ಸಾವಿರ ಹಣವನ್ನು ವಾಪಸ್ ನೀಡುವಂತೆ ಸುದೀಪ್ ಕೇಳಿದ್ದಾನೆ. 2000 ರೂ. ನಲ್ಲಿ ಸುದೀಪ್ ಗೆ 1000 ರೂ. ವಾಪಸ್ ಯುವತಿ ಕೊಟ್ಟಿದ್ದಳು. ಇನ್ನು ಉಳಿದ ಒಂದು ಸಾವಿರ ಕೊಡುವಂತೆ ಯುವತಿಗೆ ಫೋನ್ ಮಾಡಿ ಸುದೀಪ್ ಕೇಳಿದ್ದಾನೆ.

ಈ ವಿಚಾರ ಕೆಲ ಪುಂಡರಿಗೆ ಈ ಯುವತಿ ಸುದೀಪ್ ಮೇಲೆ ದೂರು ನೀಡಿದ್ದಾಳೆ. ಮೂರು ದಿನದ ಹಿಂದೆ ಜ್ಯೂಸ್ ಅಂಗಡಿ ಬಳಿ ನಾಲ್ಕೈದು ಜನ ಬಂದು ಯುವತಿ ಬಳಿ ಹಣ ಕೇಳ್ತೀಯಾ ಅಂತ ಹೇಳಿ ಅವರೇ 1000 ಸಾವಿರ ಫೋನ್ ಪೇ ಮಾಡಿ ಹೋಗಿದ್ದರು. ಇಷ್ಟಾದರು. ಮತ್ತೆ ಈ‌‌ ಸುದೀಪ್ ಆ ಯುವತಿ ಬಳಿ ಹಣ‌ ಹಾಕಿಸಿಕೊಳ್ಳುತ್ತಾನೆ.‌ಇದಕ್ಕೆ ಕುಪಿತಗೊಂಡ ಯುವಕರು ಅದೇ ದಿನ ಸಂಜೆ ಬಂದು ಯುವತಿ ಹಣ ಕೊಟ್ಟಿದ್ದರೂ ಮತ್ತೆ ಹಣ ಹಾಕಿಸಿಕೊಳ್ತೀಯಾ ಎಂದು ಗಲಾಟೆ ಮಾಡಿ ಸುದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ.

ಸುದೀಪ್ ಗೆ ಹಲ್ಲೆ ಮಾಡುತ್ತಿದ್ದ ವೇಳೆ ಬಿಡಿಸಲು ಬಂದ ಚೇತನ್ ಗೂ ಚಾಕು ಇರಿಯಲಾಗಿದೆ. ಚೇತನ್ ನ ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದೆ. ಸುದೀಪ್ ಬೆನ್ನಿಗೆ ಇರಿದು ಯುವಕರು ಎಸ್ಕೇಪ್ ಆಗಿದ್ದಾರೆ. ಬಿಡಿಸಲು ಬಂದವನು ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾನೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

25 minutes ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

11 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

15 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

17 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

19 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

2 days ago