Oplus_0
1000 ರೂ. ವಿಚಾರಕ್ಕೆ ಕಿರಿಕ್ ಆಗಿ ಇಬ್ಬರಿಗೆ ಚಾಕು ಇರಿಯಲಾಗಿದೆ. ಈ ಘಟನೆ ಇಂದು ಬೆಳಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚೇತನ್ ಮತ್ತು ಸುದೀಪ್ ಇರಿತಕ್ಕೊಳಗಾದವರು.
2 ವರ್ಷದ ಹಿಂದೆ ಸುದೀಪ್ ಗೆ ಯುವತಿಯೊಬ್ಬಳ ಜೊತೆ ಪ್ರೀತಿಯಾಗಿತ್ತು. ಆವಾಗ ಪ್ರಿಯತಮೆಗೆ 2 ಸಾವಿರ ರೂ. ಹಣವನ್ನು ಸಾಲದ ರೂಪದಲ್ಲಿ ಸುದೀಪ್ ಕೊಟ್ಟಿದ್ದ. ಇದಾದ ನಂತರ ಕೆಲ ತಿಂಗಳ ಹಿಂದೆ ಈ ಜೋಡಿ ನಡುವೆ ಬ್ರೇಕಪ್ ಆಗಿದೆ. ಬ್ರೇಕಪ್ ಆದ ನಂತರ ಮಾಜಿ ಪ್ರಿಯತಮೆ ಬಳಿ ಕೊಟ್ಟಿರುವ 2 ಸಾವಿರ ಹಣವನ್ನು ವಾಪಸ್ ನೀಡುವಂತೆ ಸುದೀಪ್ ಕೇಳಿದ್ದಾನೆ. 2000 ರೂ. ನಲ್ಲಿ ಸುದೀಪ್ ಗೆ 1000 ರೂ. ವಾಪಸ್ ಯುವತಿ ಕೊಟ್ಟಿದ್ದಳು. ಇನ್ನು ಉಳಿದ ಒಂದು ಸಾವಿರ ಕೊಡುವಂತೆ ಯುವತಿಗೆ ಫೋನ್ ಮಾಡಿ ಸುದೀಪ್ ಕೇಳಿದ್ದಾನೆ.
ಈ ವಿಚಾರ ಕೆಲ ಪುಂಡರಿಗೆ ಈ ಯುವತಿ ಸುದೀಪ್ ಮೇಲೆ ದೂರು ನೀಡಿದ್ದಾಳೆ. ಮೂರು ದಿನದ ಹಿಂದೆ ಜ್ಯೂಸ್ ಅಂಗಡಿ ಬಳಿ ನಾಲ್ಕೈದು ಜನ ಬಂದು ಯುವತಿ ಬಳಿ ಹಣ ಕೇಳ್ತೀಯಾ ಅಂತ ಹೇಳಿ ಅವರೇ 1000 ಸಾವಿರ ಫೋನ್ ಪೇ ಮಾಡಿ ಹೋಗಿದ್ದರು. ಇಷ್ಟಾದರು. ಮತ್ತೆ ಈ ಸುದೀಪ್ ಆ ಯುವತಿ ಬಳಿ ಹಣ ಹಾಕಿಸಿಕೊಳ್ಳುತ್ತಾನೆ.ಇದಕ್ಕೆ ಕುಪಿತಗೊಂಡ ಯುವಕರು ಅದೇ ದಿನ ಸಂಜೆ ಬಂದು ಯುವತಿ ಹಣ ಕೊಟ್ಟಿದ್ದರೂ ಮತ್ತೆ ಹಣ ಹಾಕಿಸಿಕೊಳ್ತೀಯಾ ಎಂದು ಗಲಾಟೆ ಮಾಡಿ ಸುದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ.
ಸುದೀಪ್ ಗೆ ಹಲ್ಲೆ ಮಾಡುತ್ತಿದ್ದ ವೇಳೆ ಬಿಡಿಸಲು ಬಂದ ಚೇತನ್ ಗೂ ಚಾಕು ಇರಿಯಲಾಗಿದೆ. ಚೇತನ್ ನ ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದೆ. ಸುದೀಪ್ ಬೆನ್ನಿಗೆ ಇರಿದು ಯುವಕರು ಎಸ್ಕೇಪ್ ಆಗಿದ್ದಾರೆ. ಬಿಡಿಸಲು ಬಂದವನು ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾನೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…