Categories: Crime

1000 ರೂ. ವಿಚಾರಕ್ಕೆ ಕಿರಿಕ್: ಇಬ್ಬರಿಗೆ ಚಾಕು ಇರಿತ

1000 ರೂ. ವಿಚಾರಕ್ಕೆ ಕಿರಿಕ್ ಆಗಿ ಇಬ್ಬರಿಗೆ ಚಾಕು ಇರಿಯಲಾಗಿದೆ. ಈ ಘಟನೆ ಇಂದು ಬೆಳಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚೇತನ್ ಮತ್ತು ಸುದೀಪ್ ಇರಿತಕ್ಕೊಳಗಾದವರು.

2 ವರ್ಷದ ಹಿಂದೆ ಸುದೀಪ್ ಗೆ ಯುವತಿಯೊಬ್ಬಳ ಜೊತೆ ಪ್ರೀತಿಯಾಗಿತ್ತು. ಆವಾಗ ಪ್ರಿಯತಮೆಗೆ 2 ಸಾವಿರ ರೂ. ಹಣವನ್ನು ಸಾಲದ ರೂಪದಲ್ಲಿ ಸುದೀಪ್ ಕೊಟ್ಟಿದ್ದ. ಇದಾದ ನಂತರ ಕೆಲ ತಿಂಗಳ ಹಿಂದೆ ಈ ಜೋಡಿ ನಡುವೆ ಬ್ರೇಕಪ್ ಆಗಿದೆ. ಬ್ರೇಕಪ್ ಆದ ನಂತರ ಮಾಜಿ ಪ್ರಿಯತಮೆ ಬಳಿ ಕೊಟ್ಟಿರುವ 2 ಸಾವಿರ ಹಣವನ್ನು ವಾಪಸ್ ನೀಡುವಂತೆ ಸುದೀಪ್ ಕೇಳಿದ್ದಾನೆ. 2000 ರೂ. ನಲ್ಲಿ ಸುದೀಪ್ ಗೆ 1000 ರೂ. ವಾಪಸ್ ಯುವತಿ ಕೊಟ್ಟಿದ್ದಳು. ಇನ್ನು ಉಳಿದ ಒಂದು ಸಾವಿರ ಕೊಡುವಂತೆ ಯುವತಿಗೆ ಫೋನ್ ಮಾಡಿ ಸುದೀಪ್ ಕೇಳಿದ್ದಾನೆ.

ಈ ವಿಚಾರ ಕೆಲ ಪುಂಡರಿಗೆ ಈ ಯುವತಿ ಸುದೀಪ್ ಮೇಲೆ ದೂರು ನೀಡಿದ್ದಾಳೆ. ಮೂರು ದಿನದ ಹಿಂದೆ ಜ್ಯೂಸ್ ಅಂಗಡಿ ಬಳಿ ನಾಲ್ಕೈದು ಜನ ಬಂದು ಯುವತಿ ಬಳಿ ಹಣ ಕೇಳ್ತೀಯಾ ಅಂತ ಹೇಳಿ ಅವರೇ 1000 ಸಾವಿರ ಫೋನ್ ಪೇ ಮಾಡಿ ಹೋಗಿದ್ದರು. ಇಷ್ಟಾದರು. ಮತ್ತೆ ಈ‌‌ ಸುದೀಪ್ ಆ ಯುವತಿ ಬಳಿ ಹಣ‌ ಹಾಕಿಸಿಕೊಳ್ಳುತ್ತಾನೆ.‌ಇದಕ್ಕೆ ಕುಪಿತಗೊಂಡ ಯುವಕರು ಅದೇ ದಿನ ಸಂಜೆ ಬಂದು ಯುವತಿ ಹಣ ಕೊಟ್ಟಿದ್ದರೂ ಮತ್ತೆ ಹಣ ಹಾಕಿಸಿಕೊಳ್ತೀಯಾ ಎಂದು ಗಲಾಟೆ ಮಾಡಿ ಸುದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ.

ಸುದೀಪ್ ಗೆ ಹಲ್ಲೆ ಮಾಡುತ್ತಿದ್ದ ವೇಳೆ ಬಿಡಿಸಲು ಬಂದ ಚೇತನ್ ಗೂ ಚಾಕು ಇರಿಯಲಾಗಿದೆ. ಚೇತನ್ ನ ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದೆ. ಸುದೀಪ್ ಬೆನ್ನಿಗೆ ಇರಿದು ಯುವಕರು ಎಸ್ಕೇಪ್ ಆಗಿದ್ದಾರೆ. ಬಿಡಿಸಲು ಬಂದವನು ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾನೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

5 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

6 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

8 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

9 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

17 hours ago