Oplus_0
1000 ರೂ. ವಿಚಾರಕ್ಕೆ ಕಿರಿಕ್ ಆಗಿ ಇಬ್ಬರಿಗೆ ಚಾಕು ಇರಿಯಲಾಗಿದೆ. ಈ ಘಟನೆ ಇಂದು ಬೆಳಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚೇತನ್ ಮತ್ತು ಸುದೀಪ್ ಇರಿತಕ್ಕೊಳಗಾದವರು.
2 ವರ್ಷದ ಹಿಂದೆ ಸುದೀಪ್ ಗೆ ಯುವತಿಯೊಬ್ಬಳ ಜೊತೆ ಪ್ರೀತಿಯಾಗಿತ್ತು. ಆವಾಗ ಪ್ರಿಯತಮೆಗೆ 2 ಸಾವಿರ ರೂ. ಹಣವನ್ನು ಸಾಲದ ರೂಪದಲ್ಲಿ ಸುದೀಪ್ ಕೊಟ್ಟಿದ್ದ. ಇದಾದ ನಂತರ ಕೆಲ ತಿಂಗಳ ಹಿಂದೆ ಈ ಜೋಡಿ ನಡುವೆ ಬ್ರೇಕಪ್ ಆಗಿದೆ. ಬ್ರೇಕಪ್ ಆದ ನಂತರ ಮಾಜಿ ಪ್ರಿಯತಮೆ ಬಳಿ ಕೊಟ್ಟಿರುವ 2 ಸಾವಿರ ಹಣವನ್ನು ವಾಪಸ್ ನೀಡುವಂತೆ ಸುದೀಪ್ ಕೇಳಿದ್ದಾನೆ. 2000 ರೂ. ನಲ್ಲಿ ಸುದೀಪ್ ಗೆ 1000 ರೂ. ವಾಪಸ್ ಯುವತಿ ಕೊಟ್ಟಿದ್ದಳು. ಇನ್ನು ಉಳಿದ ಒಂದು ಸಾವಿರ ಕೊಡುವಂತೆ ಯುವತಿಗೆ ಫೋನ್ ಮಾಡಿ ಸುದೀಪ್ ಕೇಳಿದ್ದಾನೆ.
ಈ ವಿಚಾರ ಕೆಲ ಪುಂಡರಿಗೆ ಈ ಯುವತಿ ಸುದೀಪ್ ಮೇಲೆ ದೂರು ನೀಡಿದ್ದಾಳೆ. ಮೂರು ದಿನದ ಹಿಂದೆ ಜ್ಯೂಸ್ ಅಂಗಡಿ ಬಳಿ ನಾಲ್ಕೈದು ಜನ ಬಂದು ಯುವತಿ ಬಳಿ ಹಣ ಕೇಳ್ತೀಯಾ ಅಂತ ಹೇಳಿ ಅವರೇ 1000 ಸಾವಿರ ಫೋನ್ ಪೇ ಮಾಡಿ ಹೋಗಿದ್ದರು. ಇಷ್ಟಾದರು. ಮತ್ತೆ ಈ ಸುದೀಪ್ ಆ ಯುವತಿ ಬಳಿ ಹಣ ಹಾಕಿಸಿಕೊಳ್ಳುತ್ತಾನೆ.ಇದಕ್ಕೆ ಕುಪಿತಗೊಂಡ ಯುವಕರು ಅದೇ ದಿನ ಸಂಜೆ ಬಂದು ಯುವತಿ ಹಣ ಕೊಟ್ಟಿದ್ದರೂ ಮತ್ತೆ ಹಣ ಹಾಕಿಸಿಕೊಳ್ತೀಯಾ ಎಂದು ಗಲಾಟೆ ಮಾಡಿ ಸುದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ.
ಸುದೀಪ್ ಗೆ ಹಲ್ಲೆ ಮಾಡುತ್ತಿದ್ದ ವೇಳೆ ಬಿಡಿಸಲು ಬಂದ ಚೇತನ್ ಗೂ ಚಾಕು ಇರಿಯಲಾಗಿದೆ. ಚೇತನ್ ನ ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದೆ. ಸುದೀಪ್ ಬೆನ್ನಿಗೆ ಇರಿದು ಯುವಕರು ಎಸ್ಕೇಪ್ ಆಗಿದ್ದಾರೆ. ಬಿಡಿಸಲು ಬಂದವನು ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾನೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…