101.31 ಲಕ್ಷ ಗ್ರಾಮೀಣ ಕುಟುಂಬಗಳ ಪೈಕಿ 88.06 ಮನೆಗಳಿಗೆ ನಳಸಂಪರ್ಕ- ಸಚಿವ ಪ್ರಿಯಾಂಕ್ ಖರ್ಗೆ

ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಲ ಜೀವನ ಮಿಷನ್ 2.0 ಯೋಜನೆಗೆ ಸಂಬಂಧಿಸಿದ ತಿಳಿವಳಿಕೆ ಪತ್ರ ಸಹಿ ಹಾಕುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಹಾಗೂ ಕೇಂದ್ರ ಜಲ ಶಕ್ತಿ ಸಚಿವರಾದ ಸಿ.ಆರ್. ಪಾಟೀಲ್ ಅವರೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿಡಿಯೋ ಕಾನ್ಫರೆನ್ಸ್  ಸಭೆಯಲ್ಲಿ ಭಾಗವಹಿಸಿದ್ದರು.

ಜಲಜೀವನ್ ಮಿಷನ್ ಯೋಜನೆಯಲ್ಲಿ ಕರ್ನಾಟಕದ ಪ್ರಗತಿಯ ಕುರಿತು ಸಂಕ್ಷಿಪ್ತವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿವರಿಸಿ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಅನುದಾನ ಬಿಡುಗಡೆಯ ಕುರಿತು ಮನವಿ ಮಾಡಿದರು.

➧ ದೇಶದಲ್ಲಿಯೇ ಎರಡನೇ ಅತ್ಯಂತ ಹೆಚ್ಚಿನ ಒಣಭೂಮಿ ಹೊಂದಿರುವ ರಾಜ್ಯವಾದ ಕರ್ನಾಟಕದಲ್ಲಿ ನೀರಿನ ಅಭಾವವಿದೆ. ಇದರೊಂದಿಗೆ ರಾಜ್ಯದ ಹಲವು ಭಾಗಗಳಲ್ಲಿ ಆರ್ಸೆನಿಕ್ ಹಾಗೂ ಫ್ಲೋರೈಡ್ ಮಿಶ್ರಣದ ಸಮಸ್ಯೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಗ್ರಾಮೀಣ ಕುಟುಂಬಗಳಿಗೆ ಕುಡಿಯಲು ಯೋಗ್ಯವಾದ ನೀರನ್ನು ಒದಗಿಸುವ ನಿಟ್ಟಿನಲ್ಲಿ ಜಲಮೂಲಗಳ ಸುಧಾರಣೆ ಮತ್ತು ಬೃಹತ್ ನೀರಿನ ಸರಬರಾಜು ವ್ಯವಸ್ಥೆಗೆ ಆದ್ಯತೆ ನೀಡಲಾಗಿದೆ.

➧ ಕುಡಿಯುವ ನೀರಿನ ಕಾಮಗಾರಿಗಳ ಅನುಷ್ಠಾನದಲ್ಲಿ ಕರ್ನಾಟಕ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ಈ ಯೋಜನೆಯಡಿ ಪ್ರತಿಯೊಂದು ಕಾಮಗಾರಿಗಳನ್ನು ಮೂರನೇ ಸಂಸ್ಥೆ ಮೂಲಕ ಪರಿಶೀಲನೆ ನಡೆಸಲಾಗುತ್ತಿದ್ದು, ಪಾರದರ್ಶಕತೆಗೆ ಒತ್ತು ನೀಡಲಾಗಿದೆ.

➧ ಇದುವರೆಗೆ 101.31 ಲಕ್ಷ ಗ್ರಾಮೀಣ ಕುಟುಂಬಗಳ ಪೈಕಿ 88.06 ಮನೆಗಳಿಗೆ ನಳಸಂಪರ್ಕ ಕಲ್ಪಿಸಿದ್ದು, ಶೇ. 86.93 ರಷ್ಟು ಪ್ರಗತಿ ಸಾಧಿಸಿದ್ದೇವೆ. ಈಗಾಗಲೇ ಕೈಗೊಳ್ಳಲಾಗಿರುವ 66,344 ಕಾಮಗಾರಿಗಳ ಪೈಕಿ ಸುಮಾರು 48,789 ಕಾಮಗಾರಿಗಳು ಭೌತಿಕವಾಗಿ ಪೂರ್ಣಗೊಂಡಿವೆ. ಇದರಲ್ಲಿ ಗ್ರಾಮಗಳಲ್ಲಿ 28,809 ಕಾಮಗಾರಿಗಳು ಗ್ರಾಮಗಳಲ್ಲಿ ಹಾಗೂ 19,980 ಕಾಮಗಾರಿಗಳನ್ನು ಶಾಲೆ, ಅಂಗನವಾಡಿಗಳಲ್ಲಿ ಕೈಗೊಳ್ಳಲಾಗಿದ್ದು, ಗ್ರಾಮೀಣ ಮಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದ್ದೇವೆ.

➧ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ, ಕರ್ನಾಟಕವು ₹17,554.63 ಕೋಟಿ ಬಂಡವಾಳ ಹೂಡಿದೆ. ಇದರಲ್ಲಿ ಕೇಂದ್ರದ ಪಾಲಿನ ನಿರೀಕ್ಷೆಯಲ್ಲಿ ಹೂಡಲಾಗಿರುವ ₹8,880.71 ಕೋಟಿಯೂ ಸೇರಿದ್ದು, ಯೋಜನೆಗಳ ಪೂರ್ಣಗೊಳಿಸುವ ನಿಟ್ಟಿನಲ್ಲಿ ನಮ್ಮ ಬದ್ಧತೆಯನ್ನು ತೋರಿಸುತ್ತದೆ. ಯೋಜನೆ ಅನುಷ್ಠಾನದಲ್ಲಿ ರಾಜ್ಯ ಯಾವುದೇ ರಾಜಿಯಾಗದೆ, ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದ್ದರೂ, ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಲು ವಿಳಂಬ ಮಾಡುತ್ತಿರುವುದು ದುರದೃಷ್ಟಕರ.

➧ ಗುಣಮಟ್ಟ ಖಾತ್ರಿಪಡಿಸಲು ಕರ್ನಾಟಕವು ಬ್ಯೂರೋ ವೆರಿಟಾಸ್ ಸಂಸ್ಥೆಯನ್ನು ಸ್ವತಂತ್ರ ಪರಿಶೀಲನೆ, ಮಾದರಿ ಆಧಾರಿತ ತಪಾಸಣೆ, ದಾಖಲೆಗಳ ಪರಿಶೀಲನೆ ಮತ್ತು ತಾಂತ್ರಿಕ ಪರೀಕ್ಷೆಗಳಿಗಾಗಿ ನೇಮಿಸಿದ್ದು, ತನ್ಮೂಲಕ ಕಾಮಗಾರಿಗಳ ಸುಸ್ಥಿರ ಕಾರ್ಯಶೀಲತೆಯನ್ನು ಖಾತ್ರಿ ಪಡಿಸಲಾಗುತ್ತಿದೆ.

➧ ನೀರಿನ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಇದು ಜ್ಞಾನ ಮತ್ತು ನಿರ್ದೇಶನ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. 259 ಗ್ರಾಮಗಳಿಗೆ ಈಗಾಗಲೇ 24/7 ನೀರಿನ ಸರಬರಾಜು ಸಾಧಿಸಲಾಗಿದೆ.

ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸರ್ಕಾರವು ಬದ್ಧವಾಗಿದೆ. ಮುಂಗಡ ವೆಚ್ಚದ ಮರುಪಾವತಿಗಳು ಸೇರಿದಂತೆ ಬಾಕಿಯಿರುವ ಎಲ್ಲಾ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ನಾವು ಒತ್ತಾಯಿಸುತ್ತೇವೆ. ಎಲ್ಲಾ ಗ್ರಾಮೀಣ ಜನತೆಗೆ ಇದು ನಿರಂತರ ನೀರು ಪೂರೈಕೆಯನ್ನು ಖಚಿತಪಡಿಸುತ್ತದೆ. ಜೊತೆಗೆ ವೇಗ, ಸುರಕ್ಷಿತ ಮತ್ತು ಸುಸ್ಥಿರ ಕುಡಿಯುವ ನೀರಿನ ಹಂಚಿಕೆಯ ರಾಷ್ಟ್ರೀಯ ದೃಷ್ಟಿಕೋನವನ್ನು ಸಾಮೂಹಿಕವಾಗಿ ಸಾಧಿಸಲು ನಮಗೆ ಅನುವು ಮಾಡಿಕೊಡುತ್ತದೆ ಎಂದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

47 minutes ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

12 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

13 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

14 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

17 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago