101.31 ಲಕ್ಷ ಗ್ರಾಮೀಣ ಕುಟುಂಬಗಳ ಪೈಕಿ 88.06 ಮನೆಗಳಿಗೆ ನಳಸಂಪರ್ಕ- ಸಚಿವ ಪ್ರಿಯಾಂಕ್ ಖರ್ಗೆ

ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಲ ಜೀವನ ಮಿಷನ್ 2.0 ಯೋಜನೆಗೆ ಸಂಬಂಧಿಸಿದ ತಿಳಿವಳಿಕೆ ಪತ್ರ ಸಹಿ ಹಾಕುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಹಾಗೂ ಕೇಂದ್ರ ಜಲ ಶಕ್ತಿ ಸಚಿವರಾದ ಸಿ.ಆರ್. ಪಾಟೀಲ್ ಅವರೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿಡಿಯೋ ಕಾನ್ಫರೆನ್ಸ್  ಸಭೆಯಲ್ಲಿ ಭಾಗವಹಿಸಿದ್ದರು.

ಜಲಜೀವನ್ ಮಿಷನ್ ಯೋಜನೆಯಲ್ಲಿ ಕರ್ನಾಟಕದ ಪ್ರಗತಿಯ ಕುರಿತು ಸಂಕ್ಷಿಪ್ತವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿವರಿಸಿ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಅನುದಾನ ಬಿಡುಗಡೆಯ ಕುರಿತು ಮನವಿ ಮಾಡಿದರು.

➧ ದೇಶದಲ್ಲಿಯೇ ಎರಡನೇ ಅತ್ಯಂತ ಹೆಚ್ಚಿನ ಒಣಭೂಮಿ ಹೊಂದಿರುವ ರಾಜ್ಯವಾದ ಕರ್ನಾಟಕದಲ್ಲಿ ನೀರಿನ ಅಭಾವವಿದೆ. ಇದರೊಂದಿಗೆ ರಾಜ್ಯದ ಹಲವು ಭಾಗಗಳಲ್ಲಿ ಆರ್ಸೆನಿಕ್ ಹಾಗೂ ಫ್ಲೋರೈಡ್ ಮಿಶ್ರಣದ ಸಮಸ್ಯೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಗ್ರಾಮೀಣ ಕುಟುಂಬಗಳಿಗೆ ಕುಡಿಯಲು ಯೋಗ್ಯವಾದ ನೀರನ್ನು ಒದಗಿಸುವ ನಿಟ್ಟಿನಲ್ಲಿ ಜಲಮೂಲಗಳ ಸುಧಾರಣೆ ಮತ್ತು ಬೃಹತ್ ನೀರಿನ ಸರಬರಾಜು ವ್ಯವಸ್ಥೆಗೆ ಆದ್ಯತೆ ನೀಡಲಾಗಿದೆ.

➧ ಕುಡಿಯುವ ನೀರಿನ ಕಾಮಗಾರಿಗಳ ಅನುಷ್ಠಾನದಲ್ಲಿ ಕರ್ನಾಟಕ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ಈ ಯೋಜನೆಯಡಿ ಪ್ರತಿಯೊಂದು ಕಾಮಗಾರಿಗಳನ್ನು ಮೂರನೇ ಸಂಸ್ಥೆ ಮೂಲಕ ಪರಿಶೀಲನೆ ನಡೆಸಲಾಗುತ್ತಿದ್ದು, ಪಾರದರ್ಶಕತೆಗೆ ಒತ್ತು ನೀಡಲಾಗಿದೆ.

➧ ಇದುವರೆಗೆ 101.31 ಲಕ್ಷ ಗ್ರಾಮೀಣ ಕುಟುಂಬಗಳ ಪೈಕಿ 88.06 ಮನೆಗಳಿಗೆ ನಳಸಂಪರ್ಕ ಕಲ್ಪಿಸಿದ್ದು, ಶೇ. 86.93 ರಷ್ಟು ಪ್ರಗತಿ ಸಾಧಿಸಿದ್ದೇವೆ. ಈಗಾಗಲೇ ಕೈಗೊಳ್ಳಲಾಗಿರುವ 66,344 ಕಾಮಗಾರಿಗಳ ಪೈಕಿ ಸುಮಾರು 48,789 ಕಾಮಗಾರಿಗಳು ಭೌತಿಕವಾಗಿ ಪೂರ್ಣಗೊಂಡಿವೆ. ಇದರಲ್ಲಿ ಗ್ರಾಮಗಳಲ್ಲಿ 28,809 ಕಾಮಗಾರಿಗಳು ಗ್ರಾಮಗಳಲ್ಲಿ ಹಾಗೂ 19,980 ಕಾಮಗಾರಿಗಳನ್ನು ಶಾಲೆ, ಅಂಗನವಾಡಿಗಳಲ್ಲಿ ಕೈಗೊಳ್ಳಲಾಗಿದ್ದು, ಗ್ರಾಮೀಣ ಮಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದ್ದೇವೆ.

➧ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ, ಕರ್ನಾಟಕವು ₹17,554.63 ಕೋಟಿ ಬಂಡವಾಳ ಹೂಡಿದೆ. ಇದರಲ್ಲಿ ಕೇಂದ್ರದ ಪಾಲಿನ ನಿರೀಕ್ಷೆಯಲ್ಲಿ ಹೂಡಲಾಗಿರುವ ₹8,880.71 ಕೋಟಿಯೂ ಸೇರಿದ್ದು, ಯೋಜನೆಗಳ ಪೂರ್ಣಗೊಳಿಸುವ ನಿಟ್ಟಿನಲ್ಲಿ ನಮ್ಮ ಬದ್ಧತೆಯನ್ನು ತೋರಿಸುತ್ತದೆ. ಯೋಜನೆ ಅನುಷ್ಠಾನದಲ್ಲಿ ರಾಜ್ಯ ಯಾವುದೇ ರಾಜಿಯಾಗದೆ, ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದ್ದರೂ, ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಲು ವಿಳಂಬ ಮಾಡುತ್ತಿರುವುದು ದುರದೃಷ್ಟಕರ.

➧ ಗುಣಮಟ್ಟ ಖಾತ್ರಿಪಡಿಸಲು ಕರ್ನಾಟಕವು ಬ್ಯೂರೋ ವೆರಿಟಾಸ್ ಸಂಸ್ಥೆಯನ್ನು ಸ್ವತಂತ್ರ ಪರಿಶೀಲನೆ, ಮಾದರಿ ಆಧಾರಿತ ತಪಾಸಣೆ, ದಾಖಲೆಗಳ ಪರಿಶೀಲನೆ ಮತ್ತು ತಾಂತ್ರಿಕ ಪರೀಕ್ಷೆಗಳಿಗಾಗಿ ನೇಮಿಸಿದ್ದು, ತನ್ಮೂಲಕ ಕಾಮಗಾರಿಗಳ ಸುಸ್ಥಿರ ಕಾರ್ಯಶೀಲತೆಯನ್ನು ಖಾತ್ರಿ ಪಡಿಸಲಾಗುತ್ತಿದೆ.

➧ ನೀರಿನ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಇದು ಜ್ಞಾನ ಮತ್ತು ನಿರ್ದೇಶನ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. 259 ಗ್ರಾಮಗಳಿಗೆ ಈಗಾಗಲೇ 24/7 ನೀರಿನ ಸರಬರಾಜು ಸಾಧಿಸಲಾಗಿದೆ.

ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸರ್ಕಾರವು ಬದ್ಧವಾಗಿದೆ. ಮುಂಗಡ ವೆಚ್ಚದ ಮರುಪಾವತಿಗಳು ಸೇರಿದಂತೆ ಬಾಕಿಯಿರುವ ಎಲ್ಲಾ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ನಾವು ಒತ್ತಾಯಿಸುತ್ತೇವೆ. ಎಲ್ಲಾ ಗ್ರಾಮೀಣ ಜನತೆಗೆ ಇದು ನಿರಂತರ ನೀರು ಪೂರೈಕೆಯನ್ನು ಖಚಿತಪಡಿಸುತ್ತದೆ. ಜೊತೆಗೆ ವೇಗ, ಸುರಕ್ಷಿತ ಮತ್ತು ಸುಸ್ಥಿರ ಕುಡಿಯುವ ನೀರಿನ ಹಂಚಿಕೆಯ ರಾಷ್ಟ್ರೀಯ ದೃಷ್ಟಿಕೋನವನ್ನು ಸಾಮೂಹಿಕವಾಗಿ ಸಾಧಿಸಲು ನಮಗೆ ಅನುವು ಮಾಡಿಕೊಡುತ್ತದೆ ಎಂದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago