ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಲ ಜೀವನ ಮಿಷನ್ 2.0 ಯೋಜನೆಗೆ ಸಂಬಂಧಿಸಿದ ತಿಳಿವಳಿಕೆ ಪತ್ರ ಸಹಿ ಹಾಕುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಕೇಂದ್ರ ಜಲ ಶಕ್ತಿ ಸಚಿವರಾದ ಸಿ.ಆರ್. ಪಾಟೀಲ್ ಅವರೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿದ್ದರು.
ಜಲಜೀವನ್ ಮಿಷನ್ ಯೋಜನೆಯಲ್ಲಿ ಕರ್ನಾಟಕದ ಪ್ರಗತಿಯ ಕುರಿತು ಸಂಕ್ಷಿಪ್ತವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿವರಿಸಿ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಅನುದಾನ ಬಿಡುಗಡೆಯ ಕುರಿತು ಮನವಿ ಮಾಡಿದರು.
➧ ದೇಶದಲ್ಲಿಯೇ ಎರಡನೇ ಅತ್ಯಂತ ಹೆಚ್ಚಿನ ಒಣಭೂಮಿ ಹೊಂದಿರುವ ರಾಜ್ಯವಾದ ಕರ್ನಾಟಕದಲ್ಲಿ ನೀರಿನ ಅಭಾವವಿದೆ. ಇದರೊಂದಿಗೆ ರಾಜ್ಯದ ಹಲವು ಭಾಗಗಳಲ್ಲಿ ಆರ್ಸೆನಿಕ್ ಹಾಗೂ ಫ್ಲೋರೈಡ್ ಮಿಶ್ರಣದ ಸಮಸ್ಯೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಗ್ರಾಮೀಣ ಕುಟುಂಬಗಳಿಗೆ ಕುಡಿಯಲು ಯೋಗ್ಯವಾದ ನೀರನ್ನು ಒದಗಿಸುವ ನಿಟ್ಟಿನಲ್ಲಿ ಜಲಮೂಲಗಳ ಸುಧಾರಣೆ ಮತ್ತು ಬೃಹತ್ ನೀರಿನ ಸರಬರಾಜು ವ್ಯವಸ್ಥೆಗೆ ಆದ್ಯತೆ ನೀಡಲಾಗಿದೆ.
➧ ಕುಡಿಯುವ ನೀರಿನ ಕಾಮಗಾರಿಗಳ ಅನುಷ್ಠಾನದಲ್ಲಿ ಕರ್ನಾಟಕ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ಈ ಯೋಜನೆಯಡಿ ಪ್ರತಿಯೊಂದು ಕಾಮಗಾರಿಗಳನ್ನು ಮೂರನೇ ಸಂಸ್ಥೆ ಮೂಲಕ ಪರಿಶೀಲನೆ ನಡೆಸಲಾಗುತ್ತಿದ್ದು, ಪಾರದರ್ಶಕತೆಗೆ ಒತ್ತು ನೀಡಲಾಗಿದೆ.
➧ ಇದುವರೆಗೆ 101.31 ಲಕ್ಷ ಗ್ರಾಮೀಣ ಕುಟುಂಬಗಳ ಪೈಕಿ 88.06 ಮನೆಗಳಿಗೆ ನಳಸಂಪರ್ಕ ಕಲ್ಪಿಸಿದ್ದು, ಶೇ. 86.93 ರಷ್ಟು ಪ್ರಗತಿ ಸಾಧಿಸಿದ್ದೇವೆ. ಈಗಾಗಲೇ ಕೈಗೊಳ್ಳಲಾಗಿರುವ 66,344 ಕಾಮಗಾರಿಗಳ ಪೈಕಿ ಸುಮಾರು 48,789 ಕಾಮಗಾರಿಗಳು ಭೌತಿಕವಾಗಿ ಪೂರ್ಣಗೊಂಡಿವೆ. ಇದರಲ್ಲಿ ಗ್ರಾಮಗಳಲ್ಲಿ 28,809 ಕಾಮಗಾರಿಗಳು ಗ್ರಾಮಗಳಲ್ಲಿ ಹಾಗೂ 19,980 ಕಾಮಗಾರಿಗಳನ್ನು ಶಾಲೆ, ಅಂಗನವಾಡಿಗಳಲ್ಲಿ ಕೈಗೊಳ್ಳಲಾಗಿದ್ದು, ಗ್ರಾಮೀಣ ಮಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದ್ದೇವೆ.
➧ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ, ಕರ್ನಾಟಕವು ₹17,554.63 ಕೋಟಿ ಬಂಡವಾಳ ಹೂಡಿದೆ. ಇದರಲ್ಲಿ ಕೇಂದ್ರದ ಪಾಲಿನ ನಿರೀಕ್ಷೆಯಲ್ಲಿ ಹೂಡಲಾಗಿರುವ ₹8,880.71 ಕೋಟಿಯೂ ಸೇರಿದ್ದು, ಯೋಜನೆಗಳ ಪೂರ್ಣಗೊಳಿಸುವ ನಿಟ್ಟಿನಲ್ಲಿ ನಮ್ಮ ಬದ್ಧತೆಯನ್ನು ತೋರಿಸುತ್ತದೆ. ಯೋಜನೆ ಅನುಷ್ಠಾನದಲ್ಲಿ ರಾಜ್ಯ ಯಾವುದೇ ರಾಜಿಯಾಗದೆ, ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದ್ದರೂ, ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಲು ವಿಳಂಬ ಮಾಡುತ್ತಿರುವುದು ದುರದೃಷ್ಟಕರ.
➧ ಗುಣಮಟ್ಟ ಖಾತ್ರಿಪಡಿಸಲು ಕರ್ನಾಟಕವು ಬ್ಯೂರೋ ವೆರಿಟಾಸ್ ಸಂಸ್ಥೆಯನ್ನು ಸ್ವತಂತ್ರ ಪರಿಶೀಲನೆ, ಮಾದರಿ ಆಧಾರಿತ ತಪಾಸಣೆ, ದಾಖಲೆಗಳ ಪರಿಶೀಲನೆ ಮತ್ತು ತಾಂತ್ರಿಕ ಪರೀಕ್ಷೆಗಳಿಗಾಗಿ ನೇಮಿಸಿದ್ದು, ತನ್ಮೂಲಕ ಕಾಮಗಾರಿಗಳ ಸುಸ್ಥಿರ ಕಾರ್ಯಶೀಲತೆಯನ್ನು ಖಾತ್ರಿ ಪಡಿಸಲಾಗುತ್ತಿದೆ.
➧ ನೀರಿನ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಇದು ಜ್ಞಾನ ಮತ್ತು ನಿರ್ದೇಶನ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. 259 ಗ್ರಾಮಗಳಿಗೆ ಈಗಾಗಲೇ 24/7 ನೀರಿನ ಸರಬರಾಜು ಸಾಧಿಸಲಾಗಿದೆ.
ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸರ್ಕಾರವು ಬದ್ಧವಾಗಿದೆ. ಮುಂಗಡ ವೆಚ್ಚದ ಮರುಪಾವತಿಗಳು ಸೇರಿದಂತೆ ಬಾಕಿಯಿರುವ ಎಲ್ಲಾ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ನಾವು ಒತ್ತಾಯಿಸುತ್ತೇವೆ. ಎಲ್ಲಾ ಗ್ರಾಮೀಣ ಜನತೆಗೆ ಇದು ನಿರಂತರ ನೀರು ಪೂರೈಕೆಯನ್ನು ಖಚಿತಪಡಿಸುತ್ತದೆ. ಜೊತೆಗೆ ವೇಗ, ಸುರಕ್ಷಿತ ಮತ್ತು ಸುಸ್ಥಿರ ಕುಡಿಯುವ ನೀರಿನ ಹಂಚಿಕೆಯ ರಾಷ್ಟ್ರೀಯ ದೃಷ್ಟಿಕೋನವನ್ನು ಸಾಮೂಹಿಕವಾಗಿ ಸಾಧಿಸಲು ನಮಗೆ ಅನುವು ಮಾಡಿಕೊಡುತ್ತದೆ ಎಂದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…