108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಡೀ ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ 108 ಆರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರದ ಆರೋಗ್ಯ ಸೇವೆಯನ್ನು ಪ್ರಾರಂಭಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ತ್ವರಿತ  ಗತಿಯಲ್ಲಿ ಚಿಕಿತ್ಸೆ ದೊರೆಯಬೇಕು. ಈ ದಿಸೆಯಲ್ಲಿ ಅತ್ಯಾಧುನಿಕ ಮಾದರಿಯಲ್ಲಿ ಆರೋಗ್ಯ ಸೇವೆ ದೊರೆಯಲು ಈ ಕೇಂದ್ರ ಅತ್ಯಂತ ಸಹಕಾರಿಯಾಗಿದೆ ಎಂದರು.

ರಾಜ್ಯದಲ್ಲಿ ಸುಮಾರು 18 ವರ್ಷಗಳಿಂದ 108 ಆ್ಯಂಬುಲೆನ್ಸ್ ಸೇವೆಯನ್ನು ನೀಡಲಾಗುತ್ತಿದೆ. 2025-26 ರ ಬಜೆಟ್ ಘೋಷಣೆಯಂತೆ 108 ತುರ್ತು ಆಂಬುಲೆನ್ಸ್ ಸೇವೆಗಳ ನಿರ್ವಹಣೆಗೆ ಮೀಸಲಾದ ವ್ಯವಸ್ಥೆಯನ್ನು ರೂಪಿಸಲಾಗಿದೆ. ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ಲಭಿಸುವಂತಾಗುವುದು ಮುಖ್ಯ. ಸರ್ಕಾರದ ಗುಣಮಟ್ಟದ ಆರೋಗ್ಯ ಸೇವೆಯಿಂದ ಜನರ ವಿಶ್ವಾಸ ಹೆಚ್ಚುತ್ತದೆ ಎಂದರು.

ರಸ್ತೆ ಅಪಘಾತಗಳು, ಹೆರಿಗೆ, ಹೃದಯರೋಗಿಗಳು ಸೇರಿದಂತೆ ಹಲವು ಕ್ಲಿಷ್ಟ ಸಂದರ್ಭಗಳಲ್ಲಿ ತುರ್ತು ಚಿಕಿತ್ಸೆಯ ಅತ್ಯವಶ್ಯವಾಗಿದ್ದು, ಆ ಗೋಲ್ಡನ್ ಅವರ್ ನಲ್ಲಿ ಚಿಕಿತ್ಸೆ ದೊರೆತರೆ ರೋಗಿಗಳು ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. ಗೋಲ್ಡನ್ ಅವರ್ ನಲ್ಲಿ ದೊರೆತ ಚಿಕಿತ್ಸೆಯಲ್ಲಿ ಸುಮಾರು ಶೇ.80 ರಷ್ಟು ಜನರು ಬದುಕುಳಿದಿದ್ದಾರೆ. ಜೀವನ್ಮರಣದ ಹೋರಾಟದಲ್ಲಿ  ತುರ್ತು ಚಿಕಿತ್ಸೆಯು ಹೆಚ್ಚಿನ ಮಹತ್ವವನ್ನು ಹೊಂದಿದೆ ಎಂದು‌ ತಿಳಿಸಿದರು.

ಬೆಂಗಳೂರು ನಗರದಲ್ಲಿ 65 ರಿಂದ 70 ಆ್ಯಂಬುಲೆನ್ಸ್ ಗಳಿದ್ದು, ತುರ್ತು ಚಿಕಿತ್ಸೆಗೆ ನೆರವಾಗಿವೆ. 108 ಆ್ಯಂಬುಲೆನ್ಸ್ ವ್ಯವಸ್ಥೆ ಖಾಸಗಿಯವರ ಕೈಯಲ್ಲಿದ್ದಾಗ, ಅವರ ಹೊಣೆಗಾರಿಕೆಯನ್ನು ಪ್ರಶ್ನಿಸುವಂತಿರಲಿಲ್ಲ. ಆದರೆ ಪ್ರಸ್ತುತ ಈ ವ್ಯವಸ್ಥೆ ಸರ್ಕಾರದ ಅಧೀನದಲ್ಲಿರುವುದರಿಂದ ಈ ಸೇವೆಯ ಹೊಣೆಗಾರಿಕೆ ಹೆಚ್ಚಿದೆ ಎಂದರು.

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಮ್ಮ ಆರೋಗ್ಯ ಸಮಸ್ಯೆಗೆ ನೆರವು ಕೇಳಿ ಬರುವ ಜನರು ಸರ್ಕಾರದ ಧನಸಹಾಯವನ್ನು ಬಯಸುತ್ತಾರೆ. ಆದರೆ ಜನರು ಖಾಸಗಿ ಆಸ್ಪತ್ರೆಗೆ ಹೋಗಿ, ಸರ್ಕಾರದಿಂದ ಧನಸಹಾಯ ಕೇಳುವ ಬದಲು, ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ಹೋಗಬೇಕು. ಕ್ಯಾನ್ಸರ್ ಸೇರಿದಂತೆ ಹಲವು ಕಾಯಿಲೆಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದುಬಾರಿಯಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಯ ವ್ಯವಸ್ಥೆಯಿದೆ. ಸಾಮಾನ್ಯ ಜನರಿಗೆ ಗುಣಮಟ್ಟದ ಆರೊಗ್ಯ ವ್ಯವಸ್ಥೆಯನ್ನು ನೀಡಲು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago