ಅಂತಾರಾಷ್ಟ್ರೀಯ ಯೋಗ ದಿನವನ್ನು ದೇಶಾದ್ಯಂತ 150ಕ್ಕೂ ಹೆಚ್ಚು ಪ್ರಖ್ಯಾತ ಪ್ರವಾಸಿ ತಾಣಗಳಲ್ಲಿ ಆಚರಿಸಲಾಗುತ್ತಿದೆ. ಅದೇರೀತಿ ಯೋಗದ ಮಹತ್ವ ಪ್ರಚುರ ಪಡಿಸುವ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ವಿಶ್ವ ಯೋಗ ದಿನಾಚರಣಾ ಟ್ರಸ್ಟ್ ನೇತೃತ್ವದಲ್ಲಿ ಇಂದು(ಜೂ. 21ರಂದು) ಬೆಳಗ್ಗೆ 6ಕ್ಕೆ ನಗರದ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ವಿವಿಧ ಇಲಾಖೆಗಳು ಹಾಗೂ ಯೋಗ ಕೇಂದ್ರಗಳ ಸಹಯೋಗದಲ್ಲಿ ನಡೆದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಸುಮಾರು ಸಾವಿರಕ್ಕೂ ಜನ ಭಾಗವಹಿಸಿದ್ದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಿದ್ದರು.
45 ನಿಮಿಷಗಳ ಕಾಲ ಸಾಮೂಹಿಕವಾಗಿ ಯೋಗಾಭ್ಯಾಸ ನಡೆಸಲಾಯಿತು.
ಯೋಗ ಎಂದರೆ ಶರೀರ, ಮನಸ್ಸು, ಅತ್ಮಗಳ ಸಮಾಗಮ. ಯೋಗದಿಂದ ಸಂಸ್ಕೃತಿ, ನಡೆಯಿಂದ ಒಂದಾಗುವ ಸುಸಂದರ್ಭ ಇದಾಗಿದೆ. ಯೋಗ ದಿನಾಚರಣೆಯಲ್ಲಿ ಶಿಷ್ಟಾಚಾರದ ಯೋಗ, ಪ್ರಾಣಾಯಾಮವನ್ನು ಸಾಮೂಹಿಕವಾಗಿ ಮಾಡುವುದರ ಜೊತೆಗೆ ಶಿಸ್ತುಬದ್ಧ ಬದುಕು ಹೇಗೆ ನಡೆಸುವುದು ಎನ್ನುವುದನ್ನು ಕಲಿಯಬಹುದಾಗಿದೆ.
ಈ ವೇಳೆ ವಿಶ್ವ ಯೋಗಾ ದಿನಾಚರಣೆ ಟ್ರಸ್ಟ್ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಟ್ರಸ್ಟ್ ಗೌರವ ಅಧ್ಯಕ್ಷ ಪುಷ್ಪಾಂಡಜ ದಿವ್ಯಜ್ಞಾನಾನಂದ ಸ್ವಾಮೀಜಿ, ಕಾರ್ಯದರ್ಶಿ ಬಿ.ಜಿ. ಅಮರನಾಥ್, ಉಪಾಧ್ಯಕ್ಷ ಟಿ.ಎನ್.ಪ್ರಭುದೇವ್, ಸಹ ಕಾರ್ಯದರ್ಶಿ ಎಂ.ಕೆ.ವತ್ಸಲಾ, ಖಜಾಂಚಿ ಪಿ.ಕೆ.ಶ್ರೀನಿವಾಸ್, ಸಂಚಾಲಕರಾದ ಡಿ.ವಿ.ಗಿರೀಶ್, ಡಿ.ಪಿ.ಗೋಪಾಲ್, ಸನಾತನಮೂರ್ತಿ ಸೇರಿದಂತೆ ಇತರರು ಇದ್ದರು.
ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…
ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…
ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…